logo
WhatsApp Image 2026-04-02 at 14.46.04.jpeg
hindalco everlast.jpeg

ಸುಧಾಮೂರ್ತಿ ,ಎಸ್ ಎಂ ಕೃಷ್ಣ , ಜನಪದ ಸೃತ್ಯಗಾತಿ ರಾಣಿ ಮಾಚಯ್ಯ ಸೇರಿದಂತೆ 106 ಸಾಧಕರಿಗೆ ಕೇಂದ್ರ ಸರ್ಕಾರದಿಂದ ಪದ್ಮ ಪುರಸ್ಕಾರ ಗೌರವ

ಟ್ರೆಂಡಿಂಗ್
share whatsappshare facebookshare telegram
25 Jan 2023
post image

ನವದೆಹಲಿ: ಕೇಂದ್ರ ಸರ್ಕಾರ ಅತ್ಯುನ್ನತ ಪದ್ಮ ಪುರಸ್ಕೃತರನ್ನ ಘೋಷಿಸಿದ್ದು, ಕನ್ನಡಿಗರಾದ ಸುಧಾ ಮೂರ್ತಿ, ಎಸ್. ಎಂ ಕೃಷ್ಣ, ಎಸ್.ಎಲ್ ಬೈರಪ್ಪ, ಉಮ್ಮಥಾಟ್ ಜಾನಪದ ನೃತ್ಯಗಾರ್ತಿ ರಾಣಿ ಮಾಚಯ್ಯ, ಚಿಕ್ಕಬಳ್ಳಾಪುರದ ತಮಟೆ ವಾದಕ ಮುನಿ ವೆಂಕಟಪ್ಪ ಸೇರಿ 106 ಸಾಧಕರಿಗೆ ನೀಡಲಾಗುತ್ತದೆ ಸಮಾಜ ಸೇವೆ, ಸಾರ್ವಜನಿಕ ವ್ಯವಹಾರಗಳಂತಹ ವಿವಿಧ ವಿಭಾಗಗಳು ಮತ್ತು ಚಟುವಟಿಕೆಗಳ ಕ್ಷೇತ್ರಗಳಲ್ಲಿನ ಶ್ರೇಷ್ಠತೆ, ವಿಜ್ಞಾನ ಮತ್ತು ಎಂಜಿನಿಯರಿಂಗ್, ವ್ಯಾಪಾರ ಮತ್ತು ಕೈಗಾರಿಕೆ, ವೈದ್ಯಕೀಯ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ನಾಗರಿಕ ಸೇವೆ, ಗಳಿಗೆ ನೀಡಲಾಗುತ್ತಿದೆ.

2023ನೇ ಸಾಲಿಗೆ 106 ಪದ್ಮ ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ಪ್ರದಾನ ಮಾಡಲು ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ. ಈ ಪಟ್ಟಿಯಲ್ಲಿ 6 ಪದ್ಮವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮಶ್ರೀ ಪ್ರಶಸ್ತಿಗಳು ಸೇರಿವೆ. 19 ಪ್ರಶಸ್ತಿ ಪುರಸ್ಕೃತರು ಮಹಿಳೆಯರು ಮತ್ತು ಈ ಪಟ್ಟಿಯಲ್ಲಿ ವಿದೇಶಿಯರು / ಎನ್‌ಆರ್‌ಐ / ಪಿಐಒ / ಒಸಿಐ ವರ್ಗದಿಂದ 2 ವ್ಯಕ್ತಿಗಳು ಮತ್ತು 7 ಮರಣೋತ್ತರ ಪ್ರಶಸ್ತಿ ವಿಜೇತರಿಗೆ ನೀಡಲಾಗುತ್ತದೆ

ರಾಕೇಶ್ ರಾಧೇಶ್ಯಾಮ್ ಜುಂಜುನ್ವಾಲಾ (ಮರಣೋತ್ತರ), ಆರ್‌ಆರ್‌ಆರ್ ಚಲನಚಿತ್ರ ಸಂಯೋಜಕ ಎಂಎಂ ಕೀರವಾಣಿ, ನಟಿ ರವೀನಾ ರವಿ ಟಂಡನ್ ಸೇರಿದಂತೆ 91 ಮಂದಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.