



ಉಡುಪಿ:
ಉಡುಪಿ ಶ್ರೀಕೃಷ್ಣ ಮಠದ ಬಳಿಯ ಪುತ್ತಿಗೆ ಮಠದಲ್ಲಿ 7 ಲಕ್ಷ ರೂ. ಮೌಲ್ಯದ ಚಿನ್ನದ ಗಿಂಡಿ ಕಳವಾಗಿರುವ ಘಟನೆ ನಡೆದಿದೆ. ಜು.26 ರಂದು ಬೆಳಿಗ್ಗೆ ಮಠದಲ್ಲಿ ಪೂಜೆಯ ಸಂದರ್ಭದಲ್ಲಿ 6 ಜನ ಮಠದ ವಿದ್ಯಾರ್ಥಿಗಳು ಮತ್ತು ಪುರೋಹಿತ ಲಕ್ಷ್ಮಿ ಪ್ರಸಾದ್ ರವರು ಬಂದು ಹೋಗಿದ್ದು, ಪೂಜೆಯ ನಂತರ ಪೂಜಾ ಸಾಮಾಗ್ರಿಗಳನ್ನು ತೆಗೆದು ಇಡುವಾಗ 7 ಲಕ್ಷ ರೂಪಾಯಿ ಮೌಲ್ಯದ 146 ಗ್ರಾಂ ತೂಕದ ಚಿನ್ನದ ಗಿಂಡಿ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಈ ಚಿನ್ನದ ಗಿಂಡಿಯನ್ನು ಪುರೋಹಿತ ಲಕ್ಷ್ಮಿ ಪ್ರಸಾದ್ ಅವರು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಅನುಮಾನ ಇರುವುದಾಗಿ ಪುತ್ತಿಗೆ ಮಠದಲ್ಲಿ ವ್ಯವಸ್ಥಾಪಕರಾಗಿರುವ ವಿಷ್ಣುಮೂರ್ತಿ ಇವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.