logo
WhatsApp Image 2026-04-02 at 14.46.04.jpeg
hindalco everlast.jpeg

ಶಾಲೆಗೆ ತೆರಳುತಿದ್ದ ವಿದ್ಯಾರ್ಥಿಗಳಿಗೆ ಕಾರು ಢಿಕ್ಕಿ-ಮೂವರು ಸ್ಥಳದಲ್ಲೇ ಸಾವು

ರಾಜ್ಯ
share whatsappshare facebookshare telegram
28 Feb 2023
post image

ಚೆನ್ನೈ: ಶಾಲೆಗೆ ತೆರಳುತಿದ್ದ ವಿದ್ಯಾರ್ಥಿಗಳಿಗೆ ಕಾರು ಢಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಿರುಪತ್ತೂರ್ ನ ವಾಣಿಯಂಪಾಡಿನಲ್ಲಿ ಫೆ.28 ರಂದು ನಡೆದಿದೆ.

ಮಂಗಳವಾರ ಮುಂಜಾನೆ ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಸೈಕಲ್‌ ನಲ್ಲಿ ವಿದ್ಯಾರ್ಥಿಗಳು ಗುಂಪೊಂದು ಗಿರಿಸಮುಥಿರಂನಲ್ಲಿರುವ ಸರ್ಕಾರಿ ಶಾಲೆಗೆ ಹೋಗುತ್ತಿದ್ದರು. ಈ ವೇಳೆ ವೆಲ್ಲೂರಿನಿಂದ ಬೆಂಗಳೂರಿಗೆ ಕಡೆ ಹೋಗುತ್ತಿದ್ದ ಕಾರು ವೇಗವಾಗಿ ಬಂದು ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದು, ಮರಕ್ಕೆ ಗುದ್ದಿದೆ. ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಕಾರಣ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ ವಿಜಯ್(13), ರಫೀಕ್(13) ಮತ್ತು ಸೂರ್ಯ(13) ಎನ್ನುವ ವಿದ್ಯಾರ್ಥಿಗಳು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.