



ಕುಂದಾಪುರ:
ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕಬ್ಬಿಣದ ಪ್ಲೇಟ್ ನಿಂದ ಹೊಡೆದು ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿ ದೇವಲ್ಕುಂದ ಎಂಬಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಸೊರಬ ನಿವಾಸಿ 38ವರ್ಷದ ಪೂರ್ಣಿಮಾ ಆಚಾರ್ಯ ಕೊಲೆಯಾದ ಮಹಿಳೆ. ಸಾಗರ ಮೂಲದ ನಿವಾಸಿ 42 ವರ್ಷದ ರವಿ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ರವಿ ಆಚಾರ್ಯ ಲಾರಿ ಚಾಲಕ ವೃತ್ತಿ ಮಾಡಿಕೊಂಡಿದ್ದನು. ಆದರೆ ಕುಟುಂಬದ ಕಾರ್ಯಕ್ರಮವೊಂದಕ್ಕೆ ಪತ್ನಿಯನ್ನು ಶಿವಮೊಗ್ಗದಿಂದ ಹೆಮ್ಮಾಡಿಯ ದೇವಲ್ಕುಂದಕ್ಕೆ ಕರೆದುಕೊಂಡು ಬಂದಿದ್ದನು. ಈ ವೇಳೆ ದಂಪತಿ ಮಧ್ಯೆ ಜಗಳವಾಗಿದ್ದು, ಸಿಟ್ಟಿನಲ್ಲಿ ಬರದಲ್ಲಿ ಪತ್ನಿಯ ಮೇಲೆ ಕಬ್ಬಿಣದ ಪ್ಲೇಟ್ ನಿಂದ ಹಲ್ಲೆ ಮಾಡಿ ಕೊಲೆಗೈದಿದ್ದಾನೆ. ಬಳಿಕ ತಾನೂ ಕೂಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.