



ಕಾರ್ಕಳ:
ಮೂತ್ರ ವಿಸರ್ಜನೆಗಾಗಿ ಶೌಚಾಲಯಕ್ಕೆ ಹೋಗಿದ್ದ ವೇಳೆ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಕೌಡೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಕೌಡೂರು ಗ್ರಾಮದ ನಿವಾಸಿ ವಿಠಲ ಭಂಡಾರಿ ಎಂದು ಗುರುತಿಸಲಾಗಿದೆ. ಇವರು ನಿನ್ನೆ ರಾತ್ರಿಯಿಂದ ಇಂದು ಬೆಳಿಗ್ಗಿನ ಮಧ್ಯಾವಧಿಯಲ್ಲಿ ಮನೆಯ ಒಳಗೆ ಇರುವ ಶೌಚಾಲಯಕ್ಕೆ ಮೂತ್ರ ವಿಸರ್ಜನೆ ಮಾಡಲು ಹೋಗಿದ್ದು, ಈ ವೇಳೆ ಆಯತಪ್ಪಿ ಅಡುಗೆ ಕೋಣೆಯಲ್ಲಿ ಬಿದ್ದು ತಲೆಗೆ ತೀವ್ರ ಸ್ವರೂಪದ ಏಟುಬಿದ್ದ ಪರಿಣಾಮ ಸ್ಥಳದಲ್ಲೆ ಉಸಿರುಚೆಲ್ಲಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.