



ಸಿದ್ದಾಪುರ: ಮಲಗಿದ ಸ್ಥಿತಿಯಲ್ಲೆ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಸಂತೆ ಮಾರ್ಕೆಟ್ ನಲ್ಲಿ ಆ.9ರಂದು ನಡೆದಿದೆ. ಮೃರರನ್ನು ಗುಡ್ಡೆಯಂಗಡಿ ಗ್ರಾಮದ ಹೆಮ್ಮುಂಜೆ ನಿವಾಸಿ 35ವರ್ಷದ ಸುಧಾಕರ ಆಚಾರ್ಯ ಎಂದು ಗುರುತಿಸಲಾಗಿದೆ. ಇವರು ವಿಪರೀತ ಶರಾಬು ಕುಡಿಯುವ ಚಟ ಹೊಂದಿದ್ದರು. ಆ.9ರಂದು ಸಿದ್ದಾಪುರ ಗ್ರಾಮದ ಸಂತೆ ಮಾರ್ಕೆಟ್ ಒಳಗಡೆ ಸುಧಾಕರ್ ಅವರು ಮೃತಪಟ್ಟಿದ್ದಾರೆ. ಅವರು ವಿಪರೀತ ಮದ್ಯಸೇವನೆ ಅಥವಾ ಇನ್ಯಾವುದೋ ಕಾಯಿಲೆಯಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. .
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.