logo
WhatsApp Image 2026-04-02 at 14.46.04.jpeg
hindalco everlast.jpeg

ಮಂಜೇಶ್ವರ ಕಣ್ವತೀರ್ಥದ ಖಾಸಗಿ ಶೆಡ್ಡಿನಲ್ಲಿ ತಿಮಿಂಗಿಲದ ಅಸ್ತಿಪಂಜರ ಪತ್ತೆ.!

ಟ್ರೆಂಡಿಂಗ್
share whatsappshare facebookshare telegram
30 Jul 2023
post image

ಮಂಜೇಶ್ವರ: ಮಂಜೇಶ್ವರ ಬಳಿಯ ಕಣ್ವತೀರ್ಥ ಸಮುದ್ರ ತೀರದ ಖಾಸಗಿ ಶೆಡ್ ನಲ್ಲಿ ತಿಮಿಂಗಿಲದ ಅಸ್ತಿಪಂಜರವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿ ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. 2007ರಲ್ಲಿ ಮಂಜೇಶ್ವರ ಸಮುದ್ರ ಕಿನಾರೆಗೆ ಬೃಹತ್ ಗಾತ್ರದ ತಿಮಿಂಗಿಲದ ಅಸ್ತಿ ಪಂಜರ ತೇಲಿ ಬಂದಿತ್ತು. ಅದನ್ನು ಕರ್ನಾಟಕ ನಿವಾಸಿಯ ಖಾಸಗಿ ವ್ಯಕ್ತಿಯ ಶೆಡ್ ನಲ್ಲಿ ತೆಗೆದಿರಿಸಲಾಗಿದೆ ಎಂದು ಅರಣ್ಯ ಇಲಾಖೆಯವರ ಪ್ರಾರ್ಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಈ ಶೆಡ್ ಸುಮಾರು 10 ಎಕರೆ ತೆಂಗಿನ ತೋಟದಿಂದ ಕೂಡಿದ್ದು, ಇಲ್ಲಿ ಕಾರ್ಮಿಕರು ಮಾತ್ರವೇ ವಾಸಿಸುತ್ತಿದ್ದಾರೆ. ಇದೀಗ ಇಲ್ಲಿ ತಿಮಿಂಗಿಲದ ಅಸ್ತಿ ಪಂಜರ ಪತ್ತೆಯಾಗಿದೆ. ಆದರೆ ತಿಮಿಂಗಿಲದ ಅಸ್ತಿ ಪಂಜರವನ್ನು ಬಚ್ಚಿಡುವುದು ವನ್ಯ ಜೀವಿ ಕಾನೂನು ಪ್ರಕಾರ ಅಪರಾಧವಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಮುಂದೆ ಈ ಅಸ್ತಿ ಪಂಜರವನ್ನು ಡಿ.ಎನ್. ಎ ಪರೀಕ್ಷೆಗೆ ಒಳಪಡಿಸಿ ವರದಿ ಲಭಿಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲು ಕಾಸರಗೋಡು ರೇಂಜ್ ನ ಅರಣ್ಯ ಅಧಿಕಾರಿಗಳು ತೀರ್ಮಾನಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.