



ಕಾರ್ಕಳ: ದನವನ್ನು ಹುಡುಕಿಕೊಂಡು ಹೋದ ಸಂದರ್ಭದಲ್ಲಿ ಮಹಿಳೆಯ ಯೊಬ್ಬರು ಆಕಸ್ಮಿಕವಾಗಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ನದಾಯಿಪಾಲ್ಕೆ ಎಂಬಲ್ಲಿ ಜುಲೈ7 ರಂದು ನಡೆದಿದೆ. ಮೃತ ಮಹಿಳೆ ಬೇಬಿ ಶೆಟ್ಟಿ (57) ಎಂದು ಗುರುತಿಸಲಾಗಿದೆ.
ಬೇಬಿ ಶೆಟ್ಟಿ ಜು.7 ರ ಮದ್ಯಾಹ್ನ 3 ಘಂಟೆ ವೇಳೆಯಲ್ಲಿ ದನ ಹುಡುಕಿಕೊಂಡು ಹೋಗಿದ್ದಾಗ ಆಕಸ್ಮಿಕವಾಗಿ ತೋಡಿಗೆ ಬಿದ್ದಿದ್ದಾರೆ, ಕಳೆದ ನಾಲ್ಕು ದಿನಗಳಿಂದ ಭಾರಿ ಮಳೆ ಯಾಗುತಿದ್ದ ಕಾರಣ ತೋಡಿನಲ್ಲಿ
ಭಾರಿ ಪ್ರಮಾಣದಲ್ಲಿ ಹರಿಯುತಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮುಳುಗಿ ಮೃತಪಟ್ಟಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.