



ಕಾರ್ಕಳ: ಕಾರ್ಕಳ: ನಡೆದುಕೊಂಡು ಹೋಗುವಾಗ ಹಳ್ಳಕ್ಕೆ ಜಾರಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಂದಳಿಕೆ ಆರ್ಯಾಡ್ ಮಾನಬೆಟ್ಟು ಎಂಬಲ್ಲಿ ನಡೆದಿದೆ. ಪ್ರವೀಣ್ ( 19 ) ಮೃತ ಯುವಕನಾಗಿದ್ದು . ಮೂಲತಃ ಬಾಳೆಹೊನ್ನೂರು ನಿವಾಸಿಯಾಗಿದ್ದು ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆಂದು ಬಂದಿದ್ದು ಮಂಗಳವಾರ ಮಧ್ಯಾಹ್ನ ಮನೆಯ ಸಮೀಪದ ತೋಡಿಗೆ ಮನೆಯವರೊಂದಿಗೆ ಬಟ್ಟೆ ತೊಳೆಯಲು ಹೋಗಿದ್ದ ಸಂದರ್ಭ ಆಕಸ್ಮಿಕವಾಗಿ ಆಳವಾದ ಹಳ್ಳದ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.