



ನವದೆಹಲಿ:ಬಿಜೆಪಿ ಪ್ರರ ಪ್ರಚಾರ ಮಾಡುವ ಕಿಚ್ಚ ಸುದೀಪ್ ಅವರ ಜಾಹೀರಾತು, ಸಿನಿಮಾ ಪ್ರದರ್ಶನಕ್ಕೆ ಯಾವುದೇ ತಡೆ ಇಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ನಟ ಕಿಚ್ಚ ಸುದೀಪ್ ಬಿಜೆಪಿ ನಾಯಕರ ಪರ ಪ್ರಚಾರ ಮಾಡುವುದಾಗಿ ಘೋಷಿಸಿದ್ದರು. ಇದು ಮತ್ತೊಂದು ಸುತ್ತಿನ ರಾಜಕೀಯ ಹೋರಾಟಕ್ಕೆ ವೇದಿಕೆಯಾಗಿತ್ತು. ಇದರ ಬೆನ್ನಲ್ಲೇ ಕಿಚ್ಚ ಸುದೀಪ್ ಬೆದರಿಕೆಯನ್ನೂ ಎದುರಿಸಿದ್ದರು.
ಅಲ್ಲದೆ, ಕಿಚ್ಚ ಸುದೀಪ್ ಬಿಜೆಪಿ ಪರ ಪ್ರಚಾರ ಮಾಡಲು ಘೋಷಿಸಿರುವ ಕಾರಣ, ಸುದೀಪ್ ಅವರ ಜಾಹೀರಾತು, ಸಿನಿಮಾ, ಪೋಸ್ಟರ್ಗೆ ತಡೆ ನೀಡಬೇಕು ಎಂದು ಜೆಡಿಎಸ್, ವಕೀಲರು ಸೇರಿ ಕೆಲವರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು. ಇದೀಗ ಕೇಂದ್ರ ಚುನಾವಣಾ ಆಯೋಗ ಈ ಕುರಿತು ಮಹತ್ವದ ಆದೇಶ ನೀಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.