



ಮಂಗಳೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ 8 ತಿಂಗಳ ಮಗುವೊಂದು ಸಾವನ್ನಪ್ಪಿದ ದಾರುಣ ಘಟನೆ ಕಾವೂರಿನಲ್ಲಿ ನಡೆದಿದೆ.
ಮೃತಪಟ್ಟ ಮಗುವನ್ನು ಫಿರೋಝ್ ಅನ್ಸಾರಿ ಎಂಬವರ ಪುತ್ರಿ ಆಯಿಶ ಎಂದು ಗುರುತಿಸಲಾಗಿದೆ. ಜಾರ್ಖಂಡ್ ಮೂಲದವರಾದಂತಹ ಫಿರೋಝ್ ಅನ್ಸಾರಿ ದಂಪತಿ ಕಾವೂರು ಮಸೀದಿಯ ಬಳಿ ಬಾಡಿಗೆ ಮನೆ ಮಾಡಿಕೊಂಡು ನೆಲೆಸಿದ್ದರು. ಬುಧವಾರ ಸಂಜೆ ವೇಳೆಗೆ ಮಗು ಆಯಿಶ ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಬಿಟ್ಟಿದ್ದು, ಇದರಿಂದ ಮಗು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.