logo
WhatsApp Image 2026-04-02 at 14.46.04.jpeg
hindalco everlast.jpeg

ಕೊರಂಗ್ರಪಾಡಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯ ಕುತ್ತಿಗೆಗೆ ಕೈಹಾಕಿ ಚಿನ್ನದ ಸರ ಕದಿಯಲು ಯತ್ನ

ಟ್ರೆಂಡಿಂಗ್
share whatsappshare facebookshare telegram
12 Aug 2022
post image

ಉಡುಪಿ: ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯ ಕುತ್ತಿಗೆಗೆ ಕೈಹಾಕಿ ಚಿನ್ನದ ಸರವನ್ನು ಕದಿಯಲು ಯತ್ನಿಸಿರುವ ಘಟನೆ ಕೊರಂಗ್ರಪಾಡಿ ಗ್ರಾಮದ ಗ್ಯಾರೇಜ್ ಬಳಿ ಆ.11ರಂದು ನಡೆದಿದೆ. ಕೊರಂಗ್ರಪಾಡಿಯ ಪ್ರಜ್ಞಾ ಶೆಟ್ಟಿಗಾರ್ ಎಂಬ ವಿದ್ಯಾರ್ಥಿನಿ ಉಡುಪಿಯಲ್ಲಿ ಕಂಪ್ಯೂಟರ್ ತರಗತಿ ಮುಗಿಸಿಕೊಂಡು ವಾಪಾಸು ಮನೆ ಕಡೆಗೆ ನಡೆದುಕೊಂಡು ಬರುತ್ತಿದ್ದರು. ಈ ವೇಳೆ ಕೊರಂಗ್ರಪಾಡಿಯ ಗ್ಯಾರೇಜ್ ಬಳಿ ಬೈಕ್ ನಲ್ಲಿ ಬಂದ ಓರ್ವ ಅಪರಿಚಿತ ವ್ಯಕ್ತಿ ಏಕಾಏಕಿ ಪ್ರಜ್ಞಾ ಅವರ ಎದುರು ಬಂದು ಕುತ್ತಿಗೆಯಲ್ಲಿ ಇದ್ದ ಚಿನ್ನದ ಸರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾನೆ. ಈ ವೇಳೆ ಪ್ರಜ್ಞಾ ಅವರು ಜೋರಾಗಿ ಬೊಬ್ಬೆ ಹಾಕಿದಾಗ ಆರೋಪಿ ಬೈಕ್ ನಲ್ಲಿ ಪರಾರಿಯಾಗಿದ್ದಾನೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.