logo
WhatsApp Image 2026-04-02 at 14.46.04.jpeg
hindalco everlast.jpeg

ಗಣೇಶ ಚತುರ್ಥಿಗೆ 20 ಕೆ.ಜಿ ಚಿನ್ನದ ಕಿರೀಟವನ್ನು ಉಡುಗೊರೆಯಾಗಿ ನೀಡಿದ ಅನಂತ್ ಅಂಬಾನಿ..!

ಟ್ರೆಂಡಿಂಗ್
share whatsappshare facebookshare telegram
8 Sept 2024
post image

ಮುಂಬೈ: ಗೌರಿ ಗಣೇಶನ ಹಬ್ಬಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಮಹಾ ನಗರಗಳು ಸೇರಿ ಹಳ್ಳಿ ಹಳ್ಳಿಗಳಲ್ಲೂ ಗಣೇಶನ ಮೂರ್ತಿ ತಲೆ ಎತ್ತಲಿವೆ. ಒಂದೊಂದು ಗಣೇಶ ಮೂರ್ತಿಗಳು ಕೂಡ ವಿಶೇಷತೆಗಳಿಂದ ಕೂಡಿರುತ್ತವೆ. ಇನ್ನು ಈ ಹಬ್ಬದಲ್ಲಿ ವಿಶೇಷವಾಗಿ ಗಮನ ಸೆಳೆಯುವ ಗಣೇಶೋತ್ಸವ ಅಂದರೆ ಅದು ಮುಂಬೈನ ಅತೀ ದೊಡ್ಡ ಗಣೇಶನ ಮೂರ್ತಿಯಾಗಿದೆ.

ಮುಂಬೈನ ಲಾಲ್ಚೌಚಾ ಗಣೇಶನ ಮೂರ್ತಿ ವರ್ಷಗಳಿಂದಲೂ ಬಹಳ ಪ್ರಸಿದ್ಧಿ ಪಡೆದುಕೊಂಡಿದೆ. ಈ ಗಣೇಶನ ನೋಡಲೆಂದು ಬಾಲಿವುಡ್‌ನ ಸೆಲೆಬ್ರಿಟಿಗಳು ಸಹ ಬರುವುದು ನೋಡಬಹುದು. ಆದ್ರೆ ಈಗ ಉದ್ಯಮಿ ಅನಂತ್ ಅಂಬಾನಿ 20 ಕೆ.ಜಿ ಚಿನ್ನದ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದಾರೆ. ಇಂದು ಈ ಗಣೇಶನ ಮೂರ್ತಿಯನ್ನು ಅನಾವರಣಗೊಳಿಸಲಾಗಿದ್ದು, 20 ಕೆ.ಜಿ ಮೌಲ್ಯದ ಚಿನ್ನದ ಕಿರೀಟ ಎಲ್ಲರ ಗಮನ ಸೆಳೆದಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.