



ಹೆಬ್ರಿ: ಶಾಲಾ ವಾರ್ಷಿಕೋತ್ಸವ ಮುಗಿಸಿಕೊಂಡು ಮನೆಗೆ ನಡೆದುಕೊಂಡು ಬರುತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಅಂಡಾರು ಗ್ರಾಮದ ಬೋರ್ಲಬೆಟ್ಟು ಎಂಬಲ್ಲಿ ಜ.1ರಂದು ಬೆಳಕಿಗೆ ಬಂದಿದೆ. ಮೃತರನ್ನು ಅಂಡಾರು ಗ್ರಾಮದ 45ವರ್ಷದ ಉಮೇಶ್ ರಾವ್ ಎಂದು ಗುರುತಿಸಲಾಗಿದೆ. ಇವರು ಕೂಲಿ ಕೆಲಸ ಮಾಡುತ್ತಿದ್ದು, ನಿನ್ನೆ ರಾತ್ರಿ ಅಂಡಾರಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ತೆರಳಿದ್ದರು. ತಡ ರಾತ್ರಿಯಾದರೂ ಮನೆಗೆ ವಾಪಾಸು ಬಾರದ ಕಾರಣ ಮನೆಯವರೆಲ್ಲರೂ ಹುಡುಕಾಟ ನಡೆಸಿದ್ದಾರೆ. ಇಂದು ಬೆಳಿಗ್ಗೆ ಮನೆಯ ಸಮೀಪದ ಕೆರೆಯಲ್ಲಿ ಉಮೇಶ್ ರಾವ್ ಮೃತದೇಹ ಸಿಕ್ಕಿದೆ. ಉಮೇಶ್ ಅವರು ಶಾಲಾ ವಾರ್ಷಿಕೋತ್ಸವ ಮುಗಿಸಿಕೊಂಡು ಮನೆಗೆ ಬರುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರಬಹುದು ಶಂಕಿಸಲಾಗಿದೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.