logo
WhatsApp Image 2026-04-02 at 14.46.04.jpeg
hindalco everlast.jpeg

ಅಗುಂಬೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅನೆ ಪ್ರತ್ಯಕ್ಷ.

ಟ್ರೆಂಡಿಂಗ್
share whatsappshare facebookshare telegram
6 Sept 2022
post image

ಕಾರ್ಕಳ: ಆಗುಂಬೆ ಮಲ್ಪೆ ಮೊಣಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಯಲ್ಲಿ ಸೆ.5 ರರಂದು ಆನೆಯೊಂದು ಪ್ರತ್ಯಕ್ಷ ವಾಗಿದ್ದು ಆಗುಂಬೆ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತಿದ್ದ ಪ್ರಯಾಣಿಕರು ಆತಂಕಕ್ಕೀಡಾದರು.

ಪ್ರತಿ ವರ್ಷದ ಮಳೆಗಾಲದಲ್ಲಿ ಅನೆಯೊಂದು ಅಹಾರ ಅರಸಿಕೊಂಡು ಅಗುಂಬೆಯತ್ತ ಬರುತಿದ್ದು ಯಾವುದೇ ಹಾನಿಮಾಡದೆ ಮಲ್ಲಂದೂರು ತಲ್ಲೂರು ನಾಕೂರು ಕಾಡಿನಲ್ಲಿ ಸಂಚರಿಸುತ್ತದೆ .ಮಳೆಗಾಲ‌ ಮುಗಿದ ಬಳಿಕ ಮತ್ತೆ ಕೆರೆಕಟ್ಟೆ ಮಾಳ ನಾರಾವಿಯತ್ತ ಸಾಗಿ ಹಿಂತಿರುಗುತ್ತದೆ .ಬರ್ಕಣ ಜೋಗಿಗುಂಡಿ ಜಲಪಾತ ವೀಕ್ಷಿಸಲು ಅಗಮಿಸುವ ಪ್ರವಾಸಿಗರು ಅರಣ್ಯಾಧಿಕಾರಿಗಳ ಮಾಹಿತಿ ಪಡೆದು ಸಾಗುವುದು ಒಳಿತು.

ಅಗುಂಬೆ ಹೆದ್ದಾರಿಯಲ್ಲಿ ಸಾಗುವ ಪ್ರವಾಸಿಗರು ಜಾಗೃತೆ ವಹಿಸಬೇಕು .ಪ್ರಾಣಿಗಳಿಗೆ ಹಾನಿಯಾಗಬಾರದು . ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಆನೆಯ ಚಲನವಲನಗಳ ಮಾಹಿತಿ ನೀಡಿ ಜಲಪಾತ ವೀಕ್ಷಣೆಗೆ ಅನುವು ಮಾಡಿಕೊಡಲಾಗುತ್ತದೆ .ಮಲ್ಲಂದೂರು ಸಮೀಪದಲ್ಲಿ ಆನೆಯ ಚಲನವಲನಗಳಿದ್ದರೆ ಜಲಪಾತ ವೀಕ್ಷಣೆ ತಾತ್ಕಾಲಿಕ ಬಂದ್ ಮಾಡಲಾಗುತ್ತದೆ .ಅರಣ್ಯಾಧಿಕಾರಿ ಗಳು ,ಅರಣ್ಯ ವೀಕ್ಷಕರ ಸೂಚನೆಗಳನ್ನು ಪಾಲಿಸಬೇಕು.

ವಿನಯ್ ಉಪವಲಯ ಅರಣ್ಯಾಧಿಕಾರಿ ಕುದುರೆಮುಖ ವನ್ಯಜೀವಿ ಆಗುಂಬೆ ವಲಯ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.