logo
WhatsApp Image 2026-04-02 at 14.46.04.jpeg
hindalco everlast.jpeg

ಮಣಿಪುರದಲ್ಲಿ ಮತ್ತೆ ಗುಂಡಿನ ದಾಳಿ: ಮೂವರ ಸಾವು

ಟ್ರೆಂಡಿಂಗ್
share whatsappshare facebookshare telegram
5 Aug 2023
post image

ಇಂಫಾಲ್: ಜನಾಂಗೀಯ ಘರ್ಷಣೆಯಿಂದ ನಲುಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು 3 ಜನ ಸಾವನ್ನಪ್ಪಿದ್ದಾರೆ.

ಇಂದು ಮುಂಜಾನೆ ಶಂಕಿತ ವ್ಯಕ್ತಿಗಳು ಬಿಷ್ಣುಪುರದ ಕ್ವಾಕ್ಟಾ ಬಳಿಯ ಉಖಾ ತಂಪಕ್ ಗ್ರಾಮದ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ತಂದೆ-ಮಗ ಸೇರಿದಂತೆ ಮೂವರು ಜನ ಸಾವನ್ನಪ್ಪಿದ್ದಾರೆ.

ದಾಳಿಕೋರರು ಕೇಂದ್ರ ಭದ್ರತಾ ಪಡೆಯ ನಿಯಂತ್ರಣದಲ್ಲಿರುವ ಬೆಟ್ಟಗಳು ಮತ್ತು ಕಣಿವೆಗಳ ನಡುವಿನ ಬಫರ್ ವಲಯದಿಂದ ಕದ್ದುಮುಚ್ಚಿ ಬರುತ್ತಿದ್ದಾರೆ ಎಂದು ಹೇಳಲಾಗಿದೆ. ಇದರಿಂದ ಅಲ್ಲಿಯ ಜನರಲ್ಲಿ ಆತಂಕ ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.