


ಕುಂದಾಪುರ, ಮೀನುಗಾರಿಕೆಗೆ ತೆರಳುತ್ತಿದ್ದ ಮೀನುಗಾರಿಕಾ ಬೋಟ್ವೊಂದು ನೀರಿನ ಸೆಳೆತಕ್ಕೆ ಸಿಲುಕಿ ಗಂಗೊಳ್ಳಿ ಅಳಿವೆ ಪ್ರದೇಶದಲ್ಲಿ ಬುಧವಾರ ಮುಳುಗಡೆಯಾಗಿದ್ದು, 6 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಬೋಟ್ನಲ್ಲಿದ್ದ ಸುಮಾರು ಆರು ಮಂದಿ ಮೀನುಗಾರರನ್ನು ತಕ್ಷಣವೇ ರಕ್ಷಿಸಲಾಗಿದೆ. ಬಳಿಕ ಮುಳುಗಡೆಯಾಗಿದ್ದ ಬೋಟ್ ಅನ್ನು ಯಶಸ್ವಿಯಾಗಿ ದಡಕ್ಕೆ ತರಲಾಯಿತು. ಇದೇ ಗಂಗೊಳ್ಳಿ ಅಳಿವೆ ಪ್ರದೇಶದಲ್ಲಿ ಕಳೆದ ವಾರವೂ ಮೀನುಗಾರಿಕಾ ಬೋಟ್ವೊಂದು ಭಾರೀ ಅಲೆಗಳಿಗೆ ಸಿಲುಕಿ ಸಂಪೂರ್ಣವಾಗಿ ಮುಳುಗಡೆಯಾಗಿತ್ತು. ಆ ಸಂದರ್ಭದಲ್ಲಿ ಕೂಡ ತ್ವರಿತವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ಬೋಟ್ನಲ್ಲಿದ್ದ ಎಲ್ಲಾ 27 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿತ್ತು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.