



ಮೈಸೂರು: ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಹೆಗ್ಗಳಿಕೆಯ ‘ಬಲರಾಮ’ ಆನೆಗೆ ಗುರುವಾರ ರಾತ್ರಿ ಜಮೀನಿನ ಮಾಲಕ ಸುರೇಶ್ ಎಂಬಾತ ಗುಂಡು ಹಾರಿಸಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಆತನನ್ನು ವಶಕ್ಕೆ ಪಡೆದಿದ್ದಾರೆ.ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪವಿರುವ ಜಮೀನಿಗೆ ಬಲರಾಮ ಹೋಗಿದ್ದು, ಸಿಟ್ಟಿಗೆದ್ದ ಮಾಲೀಕ ಸುರೇಶ್ ಗುಂಡು ಹಾರಿಸಿದ್ದ. ಆನೆಯ ತೊಡೆ ಬಳಿ ಗುಂಡು ಹೊಕ್ಕಿತ್ತು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಪಶುವೈದ್ಯಾಧಿಕಾರಿ ಡಾ.ರಮೇಶ್ ಚಿಕಿತ್ಸೆ ನೀಡಿದ್ದು,ಚೇತರಿಸಿಕೊಳ್ಳುತ್ತಿದೆ.
ಸುರೇಶ್ ವಿರುದ್ದ ಪ್ರಕರಣ ದಾಖಲಿಸಿ ನ್ಯಾಯಲಯಕ್ಕೆ ಒಪ್ಪಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.