logo
WhatsApp Image 2026-04-02 at 14.46.04.jpeg
hindalco everlast.jpeg

ಒಳಮೀಸಲಾತಿ ವಿರೋಧಿಸಿ ಬಂಜಾರ ಸ್ವಾಮೀಜಿ ಆತ್ಮಹತ್ಯೆಗೆ ಯತ್ನ

ಟ್ರೆಂಡಿಂಗ್
share whatsappshare facebookshare telegram
4 Apr 2023
post image

ಹಾವೇರಿ : ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಒದಗಿಸಲಾಗಿರುವ ಒಳಮೀಸಲಾತಿಯನ್ನು ವಿರೋಧಿಸಿದ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಗುಂಡೂರು ಗ್ರಾಮದಲ್ಲಿ ಬಂಜಾರ ಸಮುದಾಯದ ಸ್ವಾಮೀಜಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಂಬೇಡ್ಕತ್‌ ಪ್ರತಿಮೆ ಬಳಿ ಬಂದು ತಮ್ಮ ಕಾವಿ ವಸ್ತ್ರದ ಶಲ್ಯದಿಂದಲೇ ನೇಣು ಬಿಗಿದುಕೊಳ್ಳಲು ಮುಂದಾಗಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರದಿಂದ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಹೆಚ್ಚಳ ಮಾಡಿದ ನಂತರ ಕೆಲವೊಂದು ದಲಿತ ವರ್ಗಗಳಿಗೆ ಒಳಮೀಸಲಾತಿಯನ್ನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಒಳಮೀಸಲಾತಿಯನ್ನು ವಿರೋಧಿಸಿದ ರಾಜ್ಯಾದ್ಯಂತ ಬಂಜಾರ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಇಂದು ಮಧ್ಯಾಹ್ನದ ವೇಳೆ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಗುಂಡೂರು ಗ್ರಾಮದಲ್ಲಿ ಬಂಜಾರ ಸಮುದಾಯದ ಸ್ವಾಮೀಜಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗುಂಡೂರು ಗ್ರಾಮದಲ್ಲಿ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಮೆಟ್ಟಿಲುಗಳನ್ನು ನಿರ್ಮಿಸಿ ಎತ್ತರದ ವೇದಿಕೆಯನ್ನು ನಿರ್ಮಿಸಲಾಗಿದೆ. ಈ ವೇದಿಕೆಯ ಮೇಲೆ ಹತ್ತಿದ ಬಂಜಾರ ಸಮುದಾಯದ ಸ್ವಾಮೀಜಿ ಅಂಬೇಡ್ಕರ್‌ ಪ್ರತಿಮೆ ಬಳಿಯೇ ತಮ್ಮ ಕಾವಿ ವಸ್ತ್ರ ಶಲ್ಯದಿಂದ ನೇಣು ಕುಣಿಕೆ ತಯಾರಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.