logo
WhatsApp Image 2026-04-02 at 14.46.04.jpeg
hindalco everlast.jpeg

ಬಂಟ್ವಾಳ:ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕನಿಗೆ ಹಠಾತ್ ಎದೆ ನೋವು:ಪ್ರಯಾಣಿಕರ ಸಮಯಪ್ರಜ್ಞೆಯಿಂದ ಉಳಿಯಿತು ಜೀವ

ಟ್ರೆಂಡಿಂಗ್
share whatsappshare facebookshare telegram
31 Aug 2026
post image

ಬಂಟ್ವಾಳ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಹಠಾತ್ ಎದೆನೋವಿನಿಂದ ಕುಸಿದುಬಿದ್ದ ಘಟನೆ ಶನಿವಾರ ಸಂಜೆ ನಡೆದಿದ್ದು, ಬಸ್‌ನಲ್ಲಿದ್ದ ಸಹ ಪ್ರಯಾಣಿಕರ ಸಮಯಪ್ರಜ್ಞೆ ಹಾಗೂ ತಕ್ಷಣದ ಪ್ರಥಮ ಚಿಕಿತ್ಸೆಯಿಂದ ವ್ಯಕ್ತಿಯ ಜೀವ ಉಳಿದಿದೆ.

ಬಂಟ್ವಾಳ ತಾಲೂಕಿನ ಕುಕ್ಕಾಜೆ ನಿವಾಸಿ ರಹೀಮ್ ಕುಕ್ಕಾಜೆ ಅವರು ಶನಿವಾರ ಸಂಜೆ ಸುಮಾರು 4.45ಕ್ಕೆ ಮೆಲ್ಕಾರ್‌ನಿಂದ ಸ್ಟೇಟ್ ಬ್ಯಾಂಕ್–ಪುತ್ತೂರು ಮಾರ್ಗದ ಕೆಎಸ್‌ಆರ್‌ಟಿಸಿ ಬಸ್ ಹತ್ತಿದ್ದರು. ಬಸ್ ಸ್ವಲ್ಪ ದೂರ ಸಾಗುತ್ತಿದ್ದಂತೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾರೆ.

ತಕ್ಷಣ ನೆರವಿಗೆ ಧಾವಿಸಿದ ಸಹ ಪ್ರಯಾಣಿಕ

ಅದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯೇನೆಪೋಯ ವಿಶ್ವವಿದ್ಯಾಲಯದ ಐಟಿ ವಿಭಾಗದ ಉದ್ಯೋಗಿ ಜಗದೀಶ್ ಬೆಳ್ಳಾರೆ ಅವರು ಪರಿಸ್ಥಿತಿಯನ್ನು ಗಮನಿಸಿ ಕೂಡಲೇ ನೆರವಿಗೆ ಧಾವಿಸಿದರು. ರಹೀಮ್ ಅವರಿಗೆ ಹೃದಯ ಸಂಬಂಧಿ ತೊಂದರೆಯ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ, ಸಹ ಪ್ರಯಾಣಿಕರ ನೆರವಿನೊಂದಿಗೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಲು ಮುಂದಾದರು.

ಬಳಿಕ ಬಸ್ ಚಾಲಕ ಮತ್ತು ನಿರ್ವಾಹಕರಿಗೆ ವಿಷಯ ತಿಳಿಸಿ, ವ್ಯಕ್ತಿಯನ್ನು ವಿಳಂಬ ಮಾಡದೆ ಆಸ್ಪತ್ರೆಗೆ ಕರೆದೊಯ್ಯುವಂತೆ ಮನವಿ ಮಾಡಿದರು.

ವೈದ್ಯಕೀಯ ವಿದ್ಯಾರ್ಥಿಗಳಿಂದ CPR

ಈ ವೇಳೆ ಬಸ್‌ನಲ್ಲಿದ್ದ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಕೂಡ ತಕ್ಷಣ ನೆರವಿಗೆ ಬಂದರು. ಆಸ್ಪತ್ರೆ ತಲುಪುವವರೆಗೂ ರಹೀಮ್ ಅವರಿಗೆ CPR ಸೇರಿದಂತೆ ಅಗತ್ಯ ಪ್ರಥಮ ಚಿಕಿತ್ಸೆ ನೀಡಿದರು. ಬಳಿಕ ಅವರೂ ಆಸ್ಪತ್ರೆಗೆ ತೆರಳಿ ಚಿಕಿತ್ಸೆಗೆ ಸಹಕರಿಸಿದರು.

ಚಾಲಕ, ನಿರ್ವಾಹಕ ಹಾಗೂ ಇತರ ಸಹ ಪ್ರಯಾಣಿಕರು ಯಾವುದೇ ವಿಳಂಬ ಮಾಡದೆ ಬಸ್ಸನ್ನು ಕಲ್ಲಡ್ಕದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ರಹೀಮ್ ಅವರನ್ನು ದಾಖಲಿಸಿದರು. ಬಳಿಕ ಯೇನೆಪೋಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಬಾಲಚಂದ್ರ ಭಟ್ ಅವರು ಅಗತ್ಯ ವೈದ್ಯಕೀಯ ನೆರವು ಒದಗಿಸುವಲ್ಲಿ ಸಹಕರಿಸಿದರು.

ಸಮಯಪ್ರಜ್ಞೆಗೆ ಸಾರ್ವಜನಿಕರ ಮೆಚ್ಚುಗೆ

ತುರ್ತು ಸಂದರ್ಭದಲ್ಲಿ ಮಾನವೀಯತೆ ಮೆರೆದ ಜಗದೀಶ್ ಬೆಳ್ಳಾರೆ, ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು, ಕೆಎಸ್‌ಆರ್‌ಟಿಸಿ ಬಸ್ ಸಿಬ್ಬಂದಿ ಹಾಗೂ ಸಹ ಪ್ರಯಾಣಿಕರ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಸಂಕಷ್ಟದ ಸಂದರ್ಭದಲ್ಲಿ ತಕ್ಷಣ ನೆರವಿಗೆ ಧಾವಿಸಿ, ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದ ಎಲ್ಲರಿಗೂ ರಹೀಮ್ ಕುಕ್ಕಾಜೆ ಕೃತಜ್ಞತೆ ಸಲ್ಲಿಸಿದ್ದಾರೆ.

ಸಮಯಪ್ರಜ್ಞೆ, ಪ್ರಥಮ ಚಿಕಿತ್ಸೆ ಹಾಗೂ ತಕ್ಷಣದ ವೈದ್ಯಕೀಯ ನೆರವು ದೊರಕುವಂತೆ ಮಾಡಿದ ಈ ಸಹ ಪ್ರಯಾಣಿಕರ ನಡೆ ಮಾನವೀಯತೆಗೆ ಉತ್ತಮ ನಿದರ್ಶನವಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.