



ನವದೆಹಲಿ: ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅರ್ಹತೆ ಹೊಂದಿರಬೇಕು ಎಂಬ ನಿಯಮವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.
ಬಿ.ಇಡಿ. ಅರ್ಹತೆ ಇರಬೇಕೆಂದು ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರವು ‘ಸ್ವೇಚ್ಛೆ’ಯಿಂದ ಕೂಡಿದೆ ಮತ್ತು ‘ಅತಾರ್ಕಿಕ’ವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಗುಣಮಟ್ಟದ ಶಿಕ್ಷಣ ನೀಡುವುದಕ್ಕಾಗಿ ರೂಪಿಸಲಾದ ಶಿಕ್ಷಣ ಹಕ್ಕು ಕಾಯ್ದೆಗೂ ಈ ನಿರ್ಧಾರಕ್ಕೂ ಸಂಬಂಧವಿಲ್ಲ ಎಂದು ಕೋರ್ಟ್ ಹೇಳಿದೆ.
ಪ್ರಾಥಮಿಕ ಶಾಲಾ ಶಿಕ್ಷಕರಾಗಲು ಬಿ.ಇಡಿ. ಕಡ್ಡಾಯಗೊಳಿಸಿ ಎನ್ಸಿಟಿಇ 2018ರ ಜೂನ್ 28ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.