



ಬೆಳ್ತಂಗಡಿ: ನಗರದ ಕೃಷಿ ಇಲಾಖೆಗೆ ಸಂಬಂಧಿಸಿದ ಸೀಡ್ ಫಾರ್ಮ್ ರಸ್ತೆಯ ಸಮೀಪದ ಮನೆಯ ಮಹಿಳೆಯೊಬ್ಬರು ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಮೃತಪಟ್ಟ ಮಹಿಳೆ ನಿವೃತ್ತ ಬ್ಯಾಂಕ್ ಉದ್ಯೋಗಿ ಜೀವಂದರ್ ಪಡಿವಾಳ ಅವರ ಪತ್ನಿ ಸುಮಾಲಿನಿ ಜೈನ್ (63) ಎಂದು ತಿಳಿದು ಬಂದಿದೆ. ಸ್ಥಳೀಯ ಆ್ಯಂಬುಲೆನ್ಸ್ ಚಾಲಕ ಜಲೀಲ್ ಮೃತದೇಹವನ್ನು ಮೇಲಕೆತ್ತಿದರು ಎಂದು ತಿಳಿದು ಬಂದಿದೆ.
ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.