



ಬ್ರಹ್ಮಾವರ:
ಮನೆಯಿಂದ ಹೊರಗೆ ತೆರಳಿದ್ದ ವೃದ್ದೆಯೊಬ್ಬರು ವಾಪಾಸ್ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದಲ್ಲಿ ನಡೆದಿದೆ. ವಾರಂಬಳ್ಳಿ ಗ್ರಾಮದ ಮೂಡುಗರಡಿ ರಸ್ತೆಯ ನಿವಾಸಿ ರವಿರಾಜ್ ಶೆಟ್ಟಿ ಎಂಬವರ ತಾಯಿ 74ವರ್ಷದ ವನಜ ಶೆಟ್ಟಿ ನಾಪತ್ತೆಯಾದ ವೃದ್ಧೆ. ಇವರು ಮರೆವು ಕಾಯಿಲೆಯಿಂದ ಬಳಲುತ್ತಿದ್ದರು. ನ. 14ರ ಬೆಳಗ್ಗಿನ ಜಾವ 5:00 ಗಂಟೆಗೆ ಮನೆಯಿಂದ ಕಾಣೆಯಾಗಿದ್ಧಾರೆ. ಸಂಬಂಧಿಕರು ಮನೆ ಹಾಗೂ ಸುತ್ತಮುತ್ತ ಹುಡುಕಾಡಿದರೂ ಈವರೆಗೂ ಪತ್ತೆಯಾಗಿಲ್ಲ.. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.