



ಬ್ರಹ್ಮಾವರ: ಆರೂರು ವಿಷ್ಣುಮೂರ್ತಿ ದೇವಸ್ಥಾನದ ಆಡಳಿತದ ಮೊಕ್ತೇಸರ, ಹಾವಂಜೆ ದೊಂಪದಕುಮೇರಿ ನಿವಾಸಿ ವೈದ್ಯ ಡಾ. ಎಂ. ರಾಘವೇಂದ್ರ ರಾವ್ (76) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಘವೇಂದ್ರ ಅವರ ಪತ್ನಿ ಒಂದು ತಿಂಗಳ ಹಿಂದೆ ಮೃತಪಟ್ಟಿದ್ದರು. ಇಬ್ಬರು ಪುತ್ರಿಯರು ಮಂಗಳೂರಿನಲ್ಲಿ ವಾಸಮಾಡಿಕೊಂಡಿದ್ದರು. ಇದರಿಂದ ರಾಘವೇಂದ್ರ ಅವರಿಗೆ ಒಂಟಿತನ ಕಾಡಿದ್ದು, ಇದೇ ಖಿನ್ನತೆಯಲ್ಲಿ ನಿನ್ನೆ ಸಂಜೆ ಮನೆಯಲ್ಲಿ ಕೊಠಡಿಯ ಜಂತಿಗೆ ಸೀರೆಯನ್ನು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.