



ಬ್ರಹ್ಮಾವರ: ಸ್ಕೂಟಿ ಒಂದು ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ಸಮೀಪದ ಬಾರಕೂರು ಹೇರಾಡಿ ಬಳಿ ಸಂಭವಿಸಿದೆ.
ಮೃತಪಟ್ಟ ವ್ಯಕ್ತಿ ಶೀನ ಮರಕಾಲ (76) ಎಂದು ತಿಳಿದು ಬಂದಿದೆ.
ಅವರು ಬಾರಕೂರು ಕಡೆ ಬರುತ್ತಿದ್ದಾಗ ಸ್ಕೂಟಿ ಹಿಂದಿನಿಂದ ಢಿಕ್ಕಿ ಹೊಡೆಯತು. ತಲೆ, ಮುಖಕ್ಕೆ ತೀವ್ರ ಗಾಯಗಳಾಗಿ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಸ್ಕೂಟಿ ಸವಾರ ರಾಮಚಂದ್ರ ಸೋಮಯಾಜಿ ಅವರಿಗೂ ಗಾಯಗಳಾಗಿವೆ. ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.