




ವಾಣಿಜ್ಯ ಬ್ಯಾಂಕುಗಳಿಗೆ ಇನ್ನಷ್ಟು ಪೈಪೋಟಿ ನೀಡಲು ಸರಕಾರದ ಸಹಕಾರ ಅಗತ್ಯ: ಡಾ. ಎಂ.ಎನ್. ರಾಜೇಂದ್ರ ಕುಮಾರ್
ಬ್ರಹ್ಮಾವರ: ಸರಕಾರದ ನೆರವು ಇಲ್ಲದಿದ್ದರೂ ಸಹಕಾರಿ ಸಂಘಗಳು ನಷ್ಟವನ್ನು ಭರಿಸಿಕೊಂಡು ಅಲ್ಪಾವಧಿ, ಮಧ್ಯಮಾವಧಿ ಸಾಲವನ್ನು ನೀಡುತ್ತಿವೆ. ಆದರೆ ಸರಕಾರದ ಸಹಕಾರವಿದ್ದಾಗ ಮಾತ್ರ ವಾಣಿಜ್ಯ ಬ್ಯಾಂಕುಗಳೊಂದಿಗೆ ಇನ್ನಷ್ಟು ಪೈಪೋಟಿ ನೀಡಲು ಸಾಧ್ಯ ಎಂದು ಎಸ್ ಸಿಡಿಸಿ ಬ್ಯಾಂಕ್ ಅಧ್ಯಕ್ಷ ಡಾ|ಎಂ. ಎನ್. ರಾಜೇಂದ್ರ ಕುಮಾರ್ ಹೇಳಿದರು.
ರವಿವಾರ ಮಟಪಾಡಿಯಲ್ಲಿ ಬ್ರಹ್ಮಾವರ ವ್ಯ. ಸೇವಾ ಸಹಕಾರಿ ಸಂಘದ ನೂತನ ಹವಾನಿಯಂತ್ರಿತ ಶಾಖೆ ಉದ್ಘಾಟಿಸಿ ಅವರು ಮಾತನಾಡಿದರು. ಉತ್ತಮ ಸಂವಹನ, ಸಂಸ್ಕೃತಿಯ ಸೇವೆಯು ಸಹಕಾರಿ ಸಂಘಗಳಲ್ಲಿ ಮಾತ್ರ ಇದೆ ಎಂದರು.

108 ವರ್ಷಗಳ ಇತಿಹಾಸ ಹೊಂದಿ, 184 ಕೋಟಿ ರೂ. ಠೇವಣಿಯೊಂದಿಗೆ ಕಳೆದ 20 ವರ್ಷಗಳಿಂದ ಶೇ. 18 ಡಿವಿಡೆಂಟ್ ನೀಡುತ್ತಿರುವ ಬ್ರಹ್ಮಾವರ ಸಂಘವು ಜಿಲ್ಲೆಯಲ್ಲಿಯೇ ಅಪರೂಪದ ಸಂಸ್ಥೆ 11 ಗ್ರಾಮ ವ್ಯಾಪ್ತಿಯಲ್ಲಿ 9 ಶಾಖೆಗಳನ್ನು ಹೊಂದಿದ ಈ ಸಂಸ್ಥೆಗೆ 10 ಲಕ್ಷ ರೂ. ಧನಸಹಾಯ ನೀಡುವುದಾಗಿ ಡಾ| ಎಂ.ಎನ್.ಆರ್. ಘೋಷಿಸಿದರು.

ಸಂಘದ ಅಧ್ಯಕ್ಷ ಎನ್ ಇರ್ಮಾಡಿ ಕೆ. ತಿಮ್ಮಪ್ಪ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಯಶ್ ಪಾಲ್ ಎ. ಸುವರ್ಣ ಮಾತನಾಡಿ, ಪ್ರಾಮಾಣಿಕ ಆಡಳಿತ ಮಂಡಳಿ, ಸಿಬ್ಬಂದಿ ಹಾಗೂ ಸದಸ್ಯರಿಂದ ಸಹಕಾರಿ ಕ್ಷೇತ್ರ ಇನ್ನಷ್ಟು ಬಲಿಷ್ಠವಾಗುತ್ತದೆ ಎಂದರು. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಆರ್ಥಿಕ ಶಿಸ್ತು ವಹಿಸಿ ಗ್ರಾಹಕರ ವಿಶ್ವಾಸ ಗಳಿಸಬೇಕೆಂದರು.
ಮಾಜಿ ಶಾಸಕ ಕೆ. ರಘುಪತಿ ಭಟ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಎಸ್ ಸಿಡಿಸಿಸಿ ನಿರ್ದೇಶಕರಾದ ಡಾ| ಐ. ದೇವಿ ಪ್ರಸಾದ್ ಶೆಟ್ಟಿ, ಅಶೋಕ್ ಕುಮಾರ್ ಶೆಟ್ಟಿ ಬೆಳ್ಳಂಪಳ್ಳಿ, ರಾಜೇಶ್ ರಾವ್ ಪಾಂಗಾಳ, ತಾ.ವ್ಯ.ಉ. ಸಹಕಾರ ಮಾರಾಟ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ, ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್. ವಿ., ಹಂದಾಡಿ ಗ್ರಾ.ಪಂ. ಅಧ್ಯಕ್ಷೆ ಶೋಭಾ ಪೂಜಾರಿ, ಸಿಎ ಜೀವನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಸಂಘದ ಉಪಾಧ್ಯಕ್ಷ ವೆಂಕಟ್ರಾಯ ನಾಯಕ್, ನಿರ್ದೇಶಕರಾದ ಬರ್ತಿ ರಾಜೇಶ್ ಶೆಟ್ಟಿ, ಗಣೇಶ್ ಪ್ರಸಾದ್ ಶೆಟ್ಟಿ, ಕಮಲಾಕ್ಷ ಹೆಬ್ಬಾರ್, ಸದಾನಂದ ಪೂಜಾರಿ, ರಮೇಶ್ ಮರಕಾಲ, ಉಲ್ಲಾಸ್ ನಾಯಕ್, ನಳಿನಿ ಪ್ರದೀಪ್ ರಾವ್, ನಾಗವೇಣಿ ಪಂಡರಿನಾಥ, ಸಂಜೀವ ನಾಯ್ಕ್, ಪ್ರಕಾಶ್, ಸಹ ಸದಸ್ಯ ಮೋಹನ್ ಶೆಟ್ಟಿ, ಮುಖ್ಯ ಕಾರ್ಯನಿರ್ವಾಣಾಧಿಕಾರಿ ಎಚ್. ಸುಭಾಶ್ಚಂದ್ರ ಶೆಟ್ಟಿ, ಶಾಖಾ ವ್ಯವಸ್ಥಾಪಕ ರಘುರಾಮ ಗಾಣಿಗ ಅತಿಥಿಗಳನ್ನು ಗೌರವಿಸಿದರು.
ವಿವಿಧ ಕೊಠಡಿಗಳ ಉದ್ಘಾಟನೆ ಜರಗಿತು. ಮಾಜಿ ಅಧ್ಯಕ್ಷ ರಾಮಣ್ಣ ಅಡಿಗ ಅವರನ್ನು ಸನ್ಮಾನಿಸಲಾಯಿತು. ನಿರ್ದೇಶಕರಾದ ಜ್ಞಾನ ವಸಂತ ಶೆಟ್ಟಿ ಸ್ವಾಗತಿಸಿ, ಸತೀಶ್ಚಂದ್ರ ಚಿತ್ರಪಾಡಿ ನಿರೂಪಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.