logo
WhatsApp Image 2026-04-02 at 14.46.04.jpeg
hindalco everlast.jpeg

ಉದ್ದಿಮೆಗಳು ಇಂದಿನ ಅನಿವಾರ್ಯ: ವಿಶಾಲ್ ಹೆಗ್ಡೆ

ಟ್ರೆಂಡಿಂಗ್
share whatsappshare facebookshare telegram
4 Apr 2022
post image

ಕಾರ್ಕಳ : ಉದ್ದಿಮೆಗಳಲ್ಲಿ ಸಾಕಷ್ಟು ಸವಾಲುಗಳು ಒಳಗೊಂಡಿದೆ ಆದರೂ ಇಂದಿನ ಪರಿಸ್ಥಿತಿಯಲ್ಲಿ ದೇಶದ ಹಾಗೂ ಸ್ವ ಅಭಿವೃದ್ಧಿಗೆ ಉದ್ದಿಮೆಗಳು ಅನಿವಾರ್ಯ ಎಂದು ನಿಟ್ಟೆ ಡೀಮ್ಡ್ ವಿ ವಿ ಯ ಪ್ರೊ ಛಾನ್ಸಲರ್ ವಿಶಾಲ್ ಹೆಗ್ಡೆ ನುಡಿದರು ಅವರು ನಿಟ್ಟೆ ಜಸ್ಟಿಸ್ ಕೆ ಎಸ್ ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೆಜ್‌ಮೆಂಟ್‌ ಕಾಲೇಜಿನಲ್ಲಿ ಕೆ ಉಲ್ಲಾಸ್ ಕಾಮತ್ ಸೆಂಟರ್ ಫಾರ್ ಫ್ಯಾಮಿಲಿ ಮ್ಯಾನೇಜ್ಡ್ ಬ್ಯುಸಿನೆಸ್ ಆಶ್ರಯದಲ್ಲಿ ನಡೆಯುವ 4 ದಿನಗಳ ಕಾರ್ಯಾಗಾರ " ದಿಶಾ 2022"ನ್ನು ಉದ್ಘಾಟಿಸಿ ಮಾತನಾಡಿದರು ಮ್ಯಾನೆಜ್‌ಮೆಂಟ್‌ ಸಂಸ್ಥೆಯ ಸಂಪನ್ಮೂಲ ಹಾಗೂ ಕಾರ್ಪೊರೇಟ್ ಸಂಸ್ಥೆಗಳ ಪರಿಣಿತರು ಸೇರಿ ಕುಟುಂಬ ಯೋಜನೆ ಉದ್ದಿಮೆಯನ್ನು ಮುಂದಿನ ಪೀಳಿಗೆಗೆ ತೆಗೆದುಕೊಂಡು ಹೋಗಬೇಕಾಗಿದೆ .ಆದರೆ ಅದು ಅಷ್ಟು ಸುಲಭದ ಮಾತಲ್ಲ ಎಂದರು. ಕೆ ಉಲ್ಲಾಸ್ ಕಾಮತ್ ಸೆಂಟರ್ ಫಾರ್ ಫ್ಯಾಮಿಲಿ ಮ್ಯಾನೇಜ್ಡ್ ಬ್ಯುಸಿನೆಸ್‌ ನ ಮುಖ್ಯಸ್ಥ ಕೆ ಉಲ್ಲಾಸ್ ಕಾಮತ್ ಮಾತನಾಡಿ, ಅನ್ನದಾನ ಮತ್ತು ವಿದ್ಯಾದಾನ ಎರಡೂ ಬಹು ಪ್ರಾಮುಖ್ಯ ದಾನಗಳು. ಅನ್ನದಾನವು ಮನುಷ್ಯನ ಹೊಟ್ಟೆ ತುಂಬುವುದರೊಂದಿಗೆ ಸಂತ್ರಪ್ತಿ ಹೊಂದಿದರೆ , ವಿದ್ಯಾದಾನ ಎಷ್ಟು ಕೊಟ್ಟರೂ ಕಡಿಮೆಯಾಗುವುದಿಲ್ಲ ಬದಲಾಗಿ ಎಷ್ಟು ಕೊಟ್ಟರೂ ಪುನಃ ನಮಗೆ ಹೆಚ್ಚಿನ ಜ್ಞಾನ ಬರುತ್ತದೆ. ನಿಮಗೆ ವ್ಯವಹಾರದ ಬಗ್ಗೆ ಜ್ಞಾನ ಹೆಚ್ಚಾದಂತೆ ನೀವು ವ್ಯವಹಾರ ವ್ಯಾಪಾರದಲ್ಲಿ ಉತ್ಕೃಷ್ಟತೆ ಹೊಂದು ಸಾದ್ಯ ನನಗೆ ಎಲ್ಲವೂ ತಿಳಿದಿದೆ ಕಲಿಯಲಿಕ್ಕೆ ಏನೂ ಇಲ್ಲ ಅದರ ಅಗತ್ಯ ನಮಗಿಲ್ಲ ಎಂಬ ಭಂಡ ಜಂಭ ಹಾಗೂ ಅತಿಯಾದ ಆತ್ಮ ವಿಶ್ವಾಸದಿಂದ ಇಂದು ಉದ್ಯಮ ಗಳು ನೆಲಕಚ್ಚುತ್ತಿವೆ ಎಂದರು ಕಾರ್ಯಕ್ರಮದಲ್ಲಿ ಜಸ್ಟಿಸ್ ಕೆ ಎಸ್ ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೆಜ್‌ಮೆಂಟ್‌ ಕಾಲೇಜಿನ ನಿರ್ದೇಶಕರಾದ ಡಾ ಕೆ ಶಂಕರನ್, ಪ್ರೊ ಸುಧೀರ್ ರಾಜ್, ಕೆ ಉಲ್ಲಾಸ್ ಕಾಮತ್ ಸೆಂಟರ್ ಫಾರ್ ಫ್ಯಾಮಿಲಿ ಮ್ಯಾನೇಜ್ಡ್ ಬ್ಯುಸಿನೆಸ್‌ ಲಕ್ಷ್ಮೀ ನಾರಾಯಣ, ಸಿದ್ಧಾರ್ಥ್ ಪೈ ಉಪಸ್ಥಿತರಿದ್ದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.