



ಲಕ್ನೋ:ಸ್ಮಾರ್ಟ್ ಫೋನ್ ಖರೀದಿಸಿದರೆ ಎರಡು ಬಿಯರ್ ಕ್ಯಾನ್ ಉಚಿತವಾಗಿ ನೀಡುವುದಾಗಿ ಘೋಷಿಸಿದ ಪರಿಣಾಮ ಮೊಬೈಲ್ ಶೋ ರೂಂ ಎದುರು ಭಾರೀ ಪ್ರಮಾಣದಲ್ಲಿ ಜನ ಸೇರಲು ಆರಂಭಿಸಿದ್ದು, ಇದರಿಂದ ಸಾರ್ವಜನಿಕ ಶಾಂತಿ ಕದಡಿದ ಆರೋಪದ ಮೇಲೆ ಅಂಗಡಿ ಮಾಲೀಕನನ್ನು ಬಂಧಿಸಿರುವ ಘಟನೆ ಉತ್ತರಪ್ರದೇಶದ ಭದೋಹಿಯಲ್ಲಿ ನಡೆದಿದೆ.
ಆರೋಪಿಯ ಮೊಬೈಲ್ ಶೋರೂಂ ಅನ್ನು ಸೀಲ್ ಮಾಡಲಾಗಿದೆ. ಚೌರಿ ರಸ್ತೆ ಸಮೀಪ ಮೊಬೈಲ್ ಅಂಗಡಿ ನಡೆಸುತ್ತಿರುವ ರಾಜೇಶ್ ಮೌರ್ಯ ಎಂಬಾತ ತನ್ನ ಶೋರೂಂನಲ್ಲಿ ಮಾರ್ಚ್ 3ರಿಂದ 7ರವರೆಗೆ ಆ್ಯಂಡ್ಯಾಯ್ಡ್ ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಎರಡು ಕ್ಯಾನ್ ಬಿಯರ್ ಉಚಿತವಾಗಿ ನೀಡುವುದಾಗಿ ಪೋಸ್ಟರ್ಸ್ಸ್, ಕರಪತ್ರದ ಮೂಲಕ ಪ್ರಚಾರ ಮಾಡಿದ್ದ ಎಂದು ಕೋಟ್ವಾಲಿ ಪೊಲೀಸ್ ಠಾಣಾಧಿಕಾರಿ ಅಜಯ್ ಕುಮಾರ್ ಸೇಠ್ ತಿಳಿಸಿದ್ದಾರೆ.
ಆ್ಯಂಡ್ರಾಯ್ಡ್ ಸ್ಮಾರ್ಟ್ ಫೋನ್ ಖರೀದಿಸಿದರೆ ಉಚಿತವಾಗಿ ಎರಡು ಕ್ಯಾನ್ ಬಿಯರ್ ಪಡೆಯಿರಿ ಎಂಬ ಸುದ್ದಿ ಎಲ್ಲೆಡೆ ಹಬ್ಬಿದ ಪರಿಣಾಮ ಶೋರೂಂನತ್ತ ಜನರು ಲಗ್ಗೆ ಹಾಕತೊಡಗಿದ್ದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಅವರು ಶೋರೂಂ ಮಾಲೀಕನ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿರುವುದಾಗಿ ವರದಿ ವಿವರಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.