



ಉಡುಪಿ, ಮೇ 9: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಬೈಂದೂರು ತಾಲೂಕು ಹೇರೂರು ಗ್ರಾಮದ ರಾಗಿಹಕ್ಲು ಕಟ್ಕೇರಿ ನಿವಾಸಿ ಹೆಚ್ ಶೇಖರ್ ಗೌಡ (40) ಎಂಬ ವ್ಯಕ್ತಿಯು ಮೇ 5 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 2 ಇಂಚು ಎತ್ತರ, ಕೋಲು ಮುಖ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 08254-251033 ಅಥವಾ ಬೈಂದೂರು ವೃತ್ತ ನಿರೀಕ್ಷಕರು ದೂ.ಸಂಖ್ಯೆ: 08254-251031 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.