



ಪಾಟ್ನ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ನಿವಾಸದ ಮೇಲೆ ಸಿಬಿಐ ದಾಳಿ ಮಾಡಿದೆ. ಪಾಟ್ನದಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.
ಕಿಡ್ನಿ ಶಸ್ತ್ರ ಚಿಕಿತ್ಸೆ ಗೆ ಒಳಗಾಗಿದ್ದ ಲಾಲು ಪ್ರಸಾದ್ ಯಾದವ್ ಇತ್ತೀಚೆಗೆ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆದು ಭಾರತಕ್ಕೆ ಹಿಂತಿರುಗಿದ್ದರು. ಅವರ ಪುತ್ರಿ ತಂದೆಗ ಕಿಡ್ನಿ ದಾನ ಮಾಡಿದ್ದರು.
ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ಆರ್ ಜೆ ಡಿ ಮಧ್ಯೆ ಭಿನ್ನಾಭಿಪ್ರಾಯಗಳು ಮೂಡಿವೆ ಎಂಬ ವರದಿಗಳ ಮಧ್ಯೆ ಸಿಬಿಐ ದಾಳಿ ನಡೆದಿರುವುದು ಕುತೂಹಲ ಕೆರಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.