



ಕಾರ್ಕಳ: 27 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರಿಂದ ಥೀಮ್ ಪಾರ್ಕ್ ಉದ್ಘಾಟನೆಯಾಗಲಿದೆ ಎರಡು ಸಾವಿರ ಶಂಖವಾದಕರಿಂದ ಶಂಖನಾದ ಮೊಳಗಿಸುವ ಮೂಲಕ ಪುತ್ಥಳಿ ಉದ್ಘಾಟನೆ ನಡೆಯಲಿದೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ ಅವರು ಕಾರ್ಕಳ ತಾಲೂಕಿನ ಬೇಲೂರಿನಲ್ಲಿ ಪರಶುರಾಮ ಥೀಮ್ ಪಾರ್ಕ್ ನ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದರು ಜ.19. ( ಇಂದು) ನೇಷನ್ ಫಸ್ಟ್ ವತಿಯಿಂದ ಕಾರ್ಕಳ ಬಸ್ ನಿಲ್ದಾಣದಿಂದಪರಶುರಾಮ ಥೀಮ್ ಪಾರ್ಕ್ ವರೆಗೆ ಐತಿಹಾಸಿಕ ಪರಶುರಾಮ ದೌಡ್ ಓಟ ನಡೆಯಲಿದೆ, ಜ.24 ರಂದು ವಸ್ತು ಪ್ರದರ್ಶನ , ಆಹಾರ ಮೇಳ ಹಾಗೂ ಕಾರ್ಕಳ ಕುಕ್ಕುಂದೂರಿನಿಂದ ಬೈಲೂರು ಥಿಂ ಪಾರ್ಕ್ ವರೆಗೆ ದೀಪಾಲಂಕಾರ ಉದ್ಘಾಟನೆ ನಡೆಯಲಿದೆ
, 28 ರಂದು ಥೀಮ್ ಪಾರ್ಕ್ ನಲ್ಲಿ ಭಜನಾ ಮಂದಿರ ಉದ್ಘಾಟನೆ , 29 ರಂದು ಸಮಾರೋಪ ಸಮಾರಂಭದ ನಡೆಯಲಿದೆ. ಇ ಕಾರ್ಯಕ್ರಮ ದಲ್ಲಿ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ರಾಜ್ಯ ಸಚಿವ ಸಂಪುಟದ ಮಂತ್ರಿಗಳು ,ಅವಿಭಾಜಿತ ದ.ಕ ಜಿಲ್ಲಾ ಶಾಸಕರು, ಕಾಂತಾರ ನಿರ್ದೇಶಕ ರಿಷಬ್ ಶೆಟ್ಟಿ , ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.