logo
WhatsApp Image 2026-04-02 at 14.46.04.jpeg
hindalco everlast.jpeg

ಸಿಎಂ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು

ಟ್ರೆಂಡಿಂಗ್
share whatsappshare facebookshare telegram
21 Jun 2023
post image

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಂಗಳವಾರ ರಾತ್ರಿ 11:30ರ ವೇಳೆಗೆ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಇದರಿಂದಾಗಿ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರವಾಸದ ಸಮಯದಲ್ಲಿ ಬದಲಾವಣೆಯಾಗಿದೆ. ಬೆಳಗ್ಗೆ 9:50ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಬೇಕಿದ್ದ ಅವರು ಸ್ವಲ್ಪ ತಡವಾಗಿ ದೆಹಲಿಗೆ ತೆರಳಲಿದ್ದಾರೆ.

ಬೆಳಗ್ಗೆ 11:30ಕ್ಕೆ ಹೆಚ್‍ಎಎಲ್‍ನ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ. ತೆರಳುವ ಮುನ್ನ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.