logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ರೈಲ್ವೇ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಿ, ಜ. 10 ರಿಂದ ವಾಹನಗಳ ಸುಗಮ ಸಂಚಾರಕ್ಕೆ ಮುಕ್ತಗೊಳಿಸಿ:ಉಡುಪಿ ಡಿಸಿ ಆಗ್ರಹ

ಟ್ರೆಂಡಿಂಗ್
share whatsappshare facebookshare telegram
18 Dec 2024
post image

ಉಡುಪಿ, :ರಾಷ್ಟೀಯ ಹೆದ್ದಾರಿಯ ಇಂದ್ರಾಳಿ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನುಪೂರ್ಣಗೊಳಿಸಿ, ಜನವರಿ 10 ರಿಂದ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಭಿಯಂತರರಿಗೆ ಹಾಗೂ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಕೈಗೊಳ್ಳಲು 2018 ರಿಂದಲೇ ಕಾಮಗಾರಿಗಳನ್ನುಕೈಗೊಳ್ಳಲು ಪತ್ರ ವ್ಯವಹಾರಗಳು ನಡೆದಿದ್ದವು, ಕಳೆದ ಮೂರು ವರ್ಷದಿಂದ ಟೆಂಡರ್ಪ್ರ ಕ್ರಿಯೆಯನ್ನು ಕೈಗೊಂಡಿದ್ದರೂ ಸಹ ನಿಗಧಿತ ಕಾಲಾವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸದೇ ಇರುವುದರಿಂದ ಸಾರ್ವಜನಿಕ ಸಂಚಾರಕ್ಕೆ ಹೆಚ್ಚಿನ ವ್ಯತ್ಯಯ ಉಂಟಾಗಿ ಪ್ರತೀದಿನವೂ ಜಿಲ್ಲಾಡಳಿತಕ್ಕೆ ದೂರುಗಳು ಕೇಳಿ ಬರುತ್ತಿವೆ. ಹಾಗೂ ಅಪಘಾತಗಳು ಸಹಕಾಮಗಾರಿಯ ವಿಳಂಬದಿAದಾಗಿ ಉಂಟಾಗಿವೆ. ಇವಕ್ಕೆಲ್ಲಾಅಭಿಯಂತರರುಗಳು, ಗುತ್ತಿಗೆದಾರರೇ ಕಾರಣ ಎಂದು ಅಸಮಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಕಾಮಗಾರಿಯನ್ನುಆದ್ಯತೆಯ ಮೇಲೆ ಕೈಗೊಳ್ಳಬೇಕು.ಪ್ರತೀ ವಾರಕ್ಕೊಮ್ಮೆ ಕಾಮಗಾರಿ ಪ್ರಕ್ರಿಯೆಯ ಮಾಹಿತಿಯನ್ನುನೀಡುವಂತೆ ಸೂಚನೆ ನೀಡಿದರು.

ಮೇಲ್ಸೇತುವೆ ಕಾಮಗಾರಿಯನ್ನು ಕೈಗೊಳ್ಳಲು ಈಗಾಗಲೇ ರೈಲ್ವೆಇಲಾಖೆಯ ವತಿಯಿಂದ ಅನುಮತಿಯನ್ನು ನೀಡಲಾಗಿದ್ದು, ಸಿವಿಲ್ಕಾಮಗಾರಿ ಹಾಗೂ ಕಬ್ಬಿಣದ ಬ್ರಿಡ್ಜ್ನ ಜೋಡಣೆ ಕಾಮಗಾರಿಗಳನ್ನು ಹಗಲು ಹಾಗೂ ರಾತ್ರಿ ಎರಡು ಪಾಳಯದಲ್ಲಿ ಕಾರ್ಮಿಕರನ್ನು ನಿಯೋಜಿಸಿ, ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

ಕಾಮಗಾರಿಯನ್ನು ಕೈಗೊಳ್ಳುವಾಗ ಸುರಕ್ಷತೆಗೆ ಆದ್ಯತೆಯನ್ನು ನೀಡಬೇಕು .ರೈಲು ಸಾಗಾಣಿಕೆಗೆ ಯಾವುದೇ ತೊಂದರೆ ಆಗದಂತೆ ನಿಗಾವಹಿಸಬೇಕು ಎಂದ ಅವರು ಜನವರಿ 7 ರ ಒಳಗಾಗಿ ಪೂರ್ಣ ಪ್ರಮಾಣದಲ್ಲಿ ಕಾಮಗಾರಿಗಳನ್ನುಸಂಪೂರ್ಣವಾಗಿ ಮುಗಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿ ಡಾ.ಅರುಣ್ಕೆ, ಕೊಂಕಣ ರೈಲ್ವೆಯ ಸೀನೀಯರ್ಇಂಜಿನಿಯರ್ಗೋಪಾಲಕೃಷ್ಣ, ಶೃಂಗೇರಿ-ಚಿಕ್ಕಮಗಳೂರು ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.