



,
ಲಕ್ನೋ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲಕ್ನೋದ ಚೌಧುರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ಧರಣಿ ಆರಂಭಿಸಿದ್ದಾರೆ. ಭದ್ರತಾ ಪಡೆ ಅವರನ್ನು ಸ್ವಂತ ವಾಹನದಲ್ಲಿ ಪ್ರಯಾಣಿಸಲು ಅವಕಾಶ ನೀಡದನ್ನು ಪ್ರತಿಭಟಿಸಿ ಧರಣಿ ನಡೆಸುತ್ತಿದ್ದಾರೆ.
ಹಿಂಸಾಚಾರ ನಡೆದ ಲಖೀಮ್ ಪುರಕ್ಕೆ ತೆರಳಲು ಲಕ್ನೊಗೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ ಪೊಲೀಸ್ ವಾಹನದಲ್ಲಿ ತೆರಳುವಂತೆ ಆಡಳಿತ ಸೂಚನೆ ನೀಡಿದೆ. ಆದರೆ ರಾಹುಲ್ ಅದನ್ನು ನಿರಾಕರಿಸಿದ್ದಾರೆ. ಭದ್ರತಾ ಪಡೆಯ ಸಿಬ್ಬಂದಿಗಳು ಮಾನವಕೋಟೆ ನಿರ್ಮಿಸಿ ರಾಹುಲ್ ತೆರಳದಂತೆ ತಡೆದಿದ್ದಾರೆ. ಇನ್ನೊಂದು ಕಡೆ ವಿಮಾನ ನಿಲ್ದಾಣದ ಹೊರಭಾಗದಲ್ಲಿ ರಾಜ್ಯ ಸರಕಾರದ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಲಖೀಮ್ ಪುರಕ್ಕೆ ತೆರಳಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಸರಕಾರ ಈಗಾಗಲೇ ಬಂಧಿಸಿ ಸೀತಾಪುರ ಅತಿಥಿಗೃಹದಲ್ಲಿ ಬಂಧನದಲ್ಲಿಡಲಾಗಿದೆ. ಅತಿಥಿ ಗೃಹದ ಸುತ್ತಲು ಡ್ರೋಣ್ ಮೂಲಕ ಕಣ್ಗಾವಲು ಇರಿಸಲಾಗಿದೆ. ಪ್ರಿಯಾಂಕಾ ಗಾಂಧಿ ಅವರು 48 ರಾಶಿಗಳಿಂದ ಬಂಧನದಲ್ಲಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.