



ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಆತ್ಮಯೋಜನೆಯಡಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ವಿವಿಧ ಕೃಷಿ ಚಟುವಟಿಕೆಗಳನ್ನು ಕೈಗೊಂಡಿರುವ, ಕನಿಷ್ಠ 1 ಎಕ್ರೆ ವಿಸ್ತೀರ್ಣ ಸ್ವಂತ ಜಮೀನು ಹೊಂದಿರುವ ರೈತರು ಹಾಗೂ ರೈತ ಮಹಿಳೆಯರು ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.