logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಡಾ.ಎಂ.ಮೋಹನ ಆಳ್ವ -72: ಮೆ.31ರಂದು ಕಾರ್ಕಳ ಜ್ಞಾನಸುಧಾದಲ್ಲಿ ಸವ್ಯಸಾಚಿ ಸಂಭ್ರಮ.

ಟ್ರೆಂಡಿಂಗ್
share whatsappshare facebookshare telegram
31 May 2024
post image

ಕಾರ್ಕಳ: ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ, ಆರೋಗ್ಯ, ದೇಶಸೇವೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ಸಮರ್ಪಿಸಿಕೊಂಡು ಅದ್ವೀತಿಯ ಸಾಧನೆ ಮಾಡಿರುವ ಆಧುನಿಕ ಮೂಡುಬಿದಿರೆಯ ನಿರ್ಮಾತೃ ಡಾ. ಎಂ. ಮೋಹನ ಆಳ್ವರಿಗೆ ಕಾರ್ಕಳ ಗಣಿತನಗರದ ಜ್ಞಾನಸುಧಾ ಆವರಣದಲ್ಲಿ ಮೇ 31ರ ಶುಕ್ರವಾರ ಸಂಜೆ 5:30ಕ್ಕೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಆಶೀರ್ವಚನ ನೀಡಲಿದ್ದಾರೆ. ನಿಟ್ಟೆ ಎಜ್ಯುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಎನ್. ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.

ಪುಸ್ತಕ ಅನಾವರಣ: ಆಳ್ವರಿಗೆ 72 ಸಂವತ್ಸರ ತುಂಬಿದ ಹಿನ್ನೆಲೆಯಲ್ಲಿ ಹೊರತರಲಾದ ಪುಸ್ತಕ ಸವ್ಯಸಾಚಿ. ಇದೇ ಸಂದರ್ಭದಲ್ಲಿ ಅನಾವರಣಗೊಳ್ಳಲಿದೆ. ಆಳ್ವರ ಕುರಿತಾದ ಈ ಪುಸ್ತಕ 208 ಪುಟಗಳನ್ನು ಹೊಂದಿದ್ದು, ವಿವಿಧ ಕ್ಷೇತ್ರದ 72 ಗಣ್ಯರ ಲೇಖನ ಒಳಗೊಂಡಿದೆ. ಆಳ್ವರ ಜೀವನ, ವ್ಯಕ್ತಿತ್ವ, ಸಾಧನೆಗಳ ಕುರಿತಾಗಿರುವ ಈ ಪುಸ್ತಕದಲ್ಲಿ ಅಪರೂಪದ ಮತ್ತು ಸುಂದರವಾದ ಚಿತ್ರಗಳು ಅಚ್ಚಾಗಿವೆ.

ಆರ್ಥಿಕ ನೆರವು: ಆಳ್ವರ ಹುಟ್ಟುಹಬ್ಬದ ಪ್ರಯುಕ್ತ ಅನಾರೋಗ್ಯದಿಂದ ಬಳಲುತ್ತಿರುವ 10 ಮಂದಿ ಹಾಗೂ 5 ಸಮಾಜ ಸೇವಾ ಸಂಸ್ಥೆಗಳಿಗೆ ತಲಾ 10ಸಾವಿರದಂತೆ ಆರ್ಥಿಕ ನೆರವನ್ನು ಅಜೆಕಾರ್‌ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್‌ ನೀಡಲಿದೆ. ಕಾರ್ಕಳ ರೋಟರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಗೊಳಗಾಗುವ ರೋಗಿಗಳ ಶುಶ್ರೂಷೆಗಾಗಿ ರೂ.2ಲಕ್ಷ ಸಹಕಾರ ನೀಡಲಿದೆ. ಈ ಕಾರ್ಯಕ್ರಮದಲ್ಲಿ ಆಳ್ವರ ಹಿತೈಷಿಗಳು, ಸಾರ್ವಜನಿಕರು ಭಾಗವಹಿಸುವಂತೆ ಶಾಸಕ ವಿ. ಸುನಿಲ್‌ ಕುಮಾರ್‌, ಅಜೆಕಾರ್‌ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್‌ (ರಿ.) ಅಧ್ಯಕ್ಷ ಡಾ. ಸುಧಾಕರ್‌ ಶೆಟ್ಟಿ, ಆಳ್ವರ ಅಭಿಮಾನಿಗಳ ಬಳಗ - ಕಾರ್ಕಳ ವಿನಂತಿ ಮಾಡಿರುತ್ತಾರೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.