



ಕಡಲತೀರದಲ್ಲಿ ನೀರಿನಲ್ಲಿ ಆಟವಾಡುತಿದ್ದಾಗ ಮುಳುಗಿ ಮೃತ್ಯು.ಇಬ್ಬರ ರಕ್ಷಣೆ.
ಉಡುಪಿ: ಜಿಲ್ಲೆಯ ಮಲ್ಪೆ ಕಡಲ ತೀರದಲ್ಲಿ ನೀರಿನಲ್ಲಿ ಆಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಇಂದು ನಡೆದಿದೆ. ತುಮಕೂರಿನ ಅತ್ತರ್(23) ಎಂಬಾತ ಮೃತಪಟ್ಟರು .ಅ.5 ಮಧ್ಯಾಹ್ನ 12:00 ಗಂಟೆಗೆ ಮಲ್ಪೆ ಬೀಚ್ ಗೆ ಬಂದು ಮಧ್ಯಾಹ್ನ 2:00 ಗಂಟೆಗೆ ಸಲೀಂ, ಸಲ್ಮಾನ್, ಇಲಿಯಾಸ್, ಅರ್ಬಾಸ್, ಅತ್ತರ್, ಸುಹೇಲ್ ಇವರು ಸಮುದ್ರ ನೀರಿನಲ್ಲಿ ಆಟ ಆಟಲು ಸಮುದ್ರಕ್ಕೆ ಇಳಿದಿದಾರೆ, ಸಮುದ್ರದ ಅಲೆಗಳ ಅಬ್ಬರಕ್ಕೆ ಸಲ್ಮಾನ್, ಅರ್ಬಾಸ್, ಅತ್ತರ್ ನೀರಿನಲ್ಲಿ ಮುಳುಗಿದ್ದು, ಆ ಪೈಕಿ ಸಲ್ಮಾನ್ ಮತ್ತು ಅರ್ಬಾಸ್ ನನ್ನು ಮಲ್ಪೆ ಬೀಚ್ ನ ಟೂರಿಸ್ಟ್ ಬೋಟ್ ನವರು ರಕ್ಷಣೆ ಮಾಡಿದ್ದರು.. ಆದರೆ ಅತ್ತರ್ ನೀರಿನಲ್ಲಿ ಮುಳುಗಿ ಕಾಣೆಯಾಗಿದ್ದು, ಮಧ್ಯಾಹ್ನ 3:00 ಗಂಟೆಗೆ ಅತ್ತರ್ ಮೃತದೇಹ ನೀರಿನಲ್ಲಿ ದೊರಕಿದೆ.. ಅತ್ತರ್ ಮಲ್ಪೆ ಬೀಚ್ ನಲ್ಲಿ ಸಮುದ್ರದ ನೀರಿನಲ್ಲಿ ಆಟವಾಡುತ್ತಿರುವಾಗ ನೀರಿನ ಅಬ್ಬರಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.