



ಮಣಿಪಾಲ:
ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೋರ್ವರು ಮನೆಯಲ್ಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಮಂಚಿಕೆರೆ ಸಮೀಪದ ಮಂಜು ಶ್ರೀನಗರ ಎಂಬಲ್ಲಿ ಫೆ.22ರಂದು ರಾತ್ರಿ ನಡೆದಿದೆ. ಮಂಜು ಶ್ರೀನಗರ ನಿವಾಸಿ 32ವರ್ಷದ ಜ್ಯೋತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಣಿಪಾಲ ಠಾಣಾ ಎಸ್. ಐ ನವೀನ್ ನಾಯ್ಕ್, ಹೆಡ್ ಕಾನ್ಸ್ಟೇಬಲ್ ಸುಕುಮಾರ್ ಶೆಟ್ಟಿ, ಶೈಲೇಶ್ ಸ್ಥಳದಲ್ಲಿ ಇದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು ಪರೀಕ್ಷೆಗೆ ಸಾಗಿಸುವ ಮೂಲಕ ಇಲಾಖೆಗೆ ಸಹಕರಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.