logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಫೆ . 25 ರಂದು ಅಜೆಕಾರಿನಲ್ಲಿ ನಡೆಯಲಿದೆ ಬೃಹತ್ ಹೃದಯ ತಪಾಸಣಾ ಶಿಬಿರ

ಟ್ರೆಂಡಿಂಗ್
share whatsappshare facebookshare telegram
23 Feb 2024
post image

ಫೆ . 25 ರಂದು ಅಜೆಕಾರಿನಲ್ಲಿ ನಡೆಯಲಿದೆ ಬೃಹತ್ ಹೃದಯ ತಪಾಸಣಾ ಶಿಬಿರ

ಕಾರ್ಕಳ:ಕರೋನ ಕಾಲಘಟ್ಟದ ಬಳಿಕ ದೇಶದಲ್ಲಿ ಹೃದಯ ಘಾತ ಕ್ಕೆ ಬಲಿಯಾಗುವವರ ಸಂಖ್ಯೆ ತೀವ್ರ ಏರುಗತಿಯಲ್ಲಿ ಸಾಗುತ್ತಿದೆ‌.  ನಗರ ಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಬೇಕಾದ ಸುಸಜ್ಜಿತ ಆಸ್ಪತ್ರೆಗಳು ಇವೆ.ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಸುಸಜ್ಜಿತ ಆಸ್ಪತ್ರೆಗಳು ಇಲ್ಲ. ಈ ಹಿನ್ನೆಲೆಯಲ್ಲಿ ಹೃದಯಕ್ಕೆ  ಸ್ಥಳೀಯ ಸಂಘಸಂಸ್ಥೆಗಳು  ಸೇರಿದಂತೆ ಈ  ಬೃಹತ್ ಹೃದಯ ತಪಾಸಣಾ ಶಿಬಿರಕ್ಕೆ ಕೈಜೋಡಿಸಿವೆ.  

ಅಜೆಕಾರು ಶ್ರೀ ರಾಮಮಂದಿರ ಟ್ರಸ್ಟ್, ಅಜೆಕಾರು ಸಾರ್ವಜನಿಕ ಶಾರದಮಹೋತ್ಸವ ಸಮಿತಿ , ಡಾ. ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಮಾಹೆ ಮಣಿಪಾಲ, ಕಾರ್ಡಿಯಾಲಜಿ ಅಟ್ ಡೋರ್ಸ್ಟೆಪ್ ಫೌಂಡೇಶನ್ (ಕ್ಯಾಡ್) ಸಂಸ್ಥೆ ಇದರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಹೆಸರಾಂತ ಹೃದಯ ತಜ್ಞ ಡಾ|ಪದ್ಮನಾಭ ಕಾಮತ್ ಅವರ ತಂಡದಿಂದ ನೇತೃತ್ವದಲ್ಲಿ ಫೆ.25 ರಂದು ಅಜೆಕಾರು ರಾಮಮಂದಿರದಲ್ಲಿ  ಬೃಹತ್ ಉಚಿತ ಹೃದಯ ತಪಾಸಣಾ ಶಿಬಿರ ವು ಬೆ.8 ರಿಂದ ಮಧ್ಯಾಹ್ನ 12.30 ವರೆಗೆ ನಡೆಯಲಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರ ಅಜೆಕಾರು, ಪ್ರಾಥಮಿಕ ಆರೋಗ್ಯ ಕೇಂದ್ರ ದೊಂಡೆರಂಗಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮುನಿಯಾಲು, ಪ್ರಾಥಮಿಕ ಆರೋಗ್ಯ ಕೇಂದ್ರ ಹಿರ್ಗಾನ , ಇದರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಾರ್ವಜನಿಕರು ಪ್ರಯೋಜನ ಪಡೆಯಬಹುದಾಗಿದೆ. ಸುಮಾರು ಒಂದು ಸಾವಿರಕ್ಕೂ ಹೆಚ್ಚು ಹೃದ್ರೋಗ ತಪಾಸಣಾ  ಶಿಬಿರಗಳನ್ನು ಆಯೋಜಿಸಿ   ಯಶಸ್ವಿ ಯಾಗಿರುವ ಮಂಗಳೂರಿನ ಡಾ| ಪದ್ಮನಾಭ ಕಾಮತ್ ತಂಡವೆ ನೇತೃತ್ವ ವಹಿಸಿದೆ.

ಸಮಾನ್ಯ ಹೃದಯ ತಪಾಸಣೆ, ಮಧುಮೇಹ ಮತ್ತು ರಕ್ತದೊತ್ತಡ ದಿಂದ ಬಳಲುತ್ತಿರುವವರು,ಹೃದಯ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವವರು, ಹೃದಯ ಚಿಕಿತ್ಸೆಗೆ ಒಳಗಾದವರು, ಕೆಂಜಿನಿಟಲ್ ಹಾರ್ಡ್ ರಿಮಾಟಿಕ್ ಹಾರ್ಟ್ ತೊಂದರೆಗೆ ಒಳಗಾದರು, ಹೃದಯ ತೊಂದರೆ ಸಂಬಂದಿತ ಎಲ್ಲಾ ಮಾಹಿತಿಗಳನ್ನು ಪಡೆಯಬಹುದಾಗಿದೆ. ಫೆ.19 ರಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ  ನಿಗದಿ ಪಡಿಸಿದ ಸೋಮವಾರದಿಂದ ಗ್ರಾಮ‌ ವ್ಯಾಪ್ತಿಗಳ ಎಲ್ಲಾ ಇಸಿಜಿ ಕೇಂದ್ರ ಗಳಲ್ಲಿ ಪೂರ್ವ ದಲ್ಲಿ ರಿಜಿಸ್ಟ್ರಾರ್ ಮಾಡಬಹುದು. ಇದರಿಂದಾಗಿ ಸಲಹೆ ಸೂಚನೆಗಳನ್ನು ವೇಗವಾಗಿ ಪಡೆಯಲು ಸಾಧ್ಯವಾಗಲಿದೆ. ಅಜೆಕಾರು ವ್ಯಾಪ್ತಿಯಲ್ಲಿ 4 ಇಸಿಜಿ ಕೇಂದ್ರಗಳಿದ್ದು ಹೆಚ್ಚಿನ ಪ್ರಯೋಜನ ಪಡೆಯಬಹುದಾಗಿದೆ.

"ಪ್ರತಿಯೊಂದು ಗ್ರಾಮೀಣ ಅರೋಗ್ಯ ಶಿಬಿರವು  ತನ್ನದೇ ಆದ ಒಂದು ವೈಶಿಷ್ಟ್ಯತೆ ಹೊಂದಿದೆ. ನಾನು ಮಾಡುವ ಪ್ರಯತ್ನ ಕೇವಲ ವೈದ್ಯನಾಗಿ ಅಲ್ಲಾ . ಪ್ರತಿಯೊಂದು ಶಿಬಿರ ದಲ್ಲಿ ನಾನು ಸ್ವಯಂಸೇವಕನಾಗಿ ದುಡಿದಿದ್ದೇನೆ.  ಆರೋಗ್ಯವೇ ನಮ್ಮ ಆಸ್ತಿಯಾಗಿದೆ. ನಾವೆಲ್ಲರೂ ಜಾತಿ ಮತ ಧರ್ಮ ತೊರೆದು ಈ ಶಿಬಿರದಲ್ಲಿ ಭಾಗವಹಿಸೋಣ ಎನ್ನುತ್ತಾರೆ" ಮಂಗಳೂರಿನ ಖ್ಯಾತ ಹೃದಯ ತಜ್ಞ ಡಾ|ಪದ್ಮನಾಭ ಕಾಮತ್ 

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.