



ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿಪೂರ್ವ ವಿಭಾಗ ) ಮತ್ತು ಗುರುಕುಲ ಪದವಿ ಪೂರ್ವ ಕಾಲೇಜು ವಕ್ವಾಡಿ ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದಿದೆ.
ವಿದ್ಯಾರ್ಥಿಗಳೊಂದಿಗೆ ಕಾಲೇಜು ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.