



ಬೆಂಗಳೂರು: ನಮ್ಮ ಮೆಟ್ರೋ ನೇರಳೆ ಮಾರ್ಗದ ಕೆಲವು ನಿಲ್ದಾಣಗಳಲ್ಲಿ ರೈಲು ಸಂಚಾರ ಸ್ಥಗಿತವಾಗಲಿದೆ.
ನೇರಳೆ ಮಾರ್ಗದಲ್ಲಿನ ಬೈಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳನ್ನು ಸಂಪರ್ಕವನ್ನು ಕಲ್ಪಿಸಲು ಸಿಗ್ನಲಿಂಗ್ ಹಾಗೂ ಇತರ ಸಂಬಂಧಿತ ಕಾಮಗಾರಿ ಕೈಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಜುಲೈ 10 ರಿಂದ ಆಗಸ್ಟ್ 09 ರವರೆಗೆ ಬೈಯಪ್ಪನಹಳ್ಳಿ- ಎಸ್.ವಿ. ರಸ್ತೆ ಹಾಗೂ ಕೃಷ್ಣರಾಜಪುರ- ವೈಟ್ಫೀಲ್ಡ್ (ಕಾಡುಗೋಡಿ) ಮಾರ್ಗಗಳ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತ ಮಾಡಲಾಗುತ್ತಿದೆ.
ಬೆಳಗ್ಗೆ 2 ಗಂಟೆ ಮಾತ್ರ ಸ್ಥಗಿತ: ಬೆಳಗ್ಗೆ 5.00 ಗಂಟೆಯಿಂದ 7.00 ಗಂಟೆವರೆಗೆ ಬೈಯಪ್ಪನಹಳ್ಳಿ ಮತ್ತು ಎಸ್.ವಿ ರಸ್ತೆ ಗೂ ಕೃಷ್ಣರಾಜಪುರ ಮತ್ತು ವೈಟ್ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳ ನಡುವೆಯ ಮೆಟ್ರೋ ರೈಲು ಸೇವೆ ಸ್ಥಗಿತಗೊಳಿಸಲಾಗುತ್ತದೆ. ಬೆಳಗ್ಗೆ 7.00 ಗಂಟೆಯ ನಂತರ ಬೈಯಪ್ಪನಹಳ್ಳಿ ಮತ್ತು ಕೆಂಗೇರಿ ಹಾಗೂ ಕೃಷ್ಣರಾಜಪುರ ಮತ್ತು ವೈಟ್ಫೀಲ್ಡ್ (ಕಾಡುಗೋಡಿ) ಮೆಟ್ರೋ ನಿಲ್ದಾಣಗಳ ನಡುವೆ ವಾಣಿಜ್ಯ ರೈಲು ಸೇವೆಗಳು ಎಂದಿನಂತೆ ರಾತ್ರಿ 11.00 ಗಂಟೆಯವರೆಗೆ ಲಭ್ಯವಿರುತ್ತವೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.