



ಬೆಂಗಳೂರು: ಕಾಮಗಾರಿ ವೇಳೆ ಗ್ಯಾಸ್ ಪೈಪ್ ಲೈನ್ ಗೆ ಹಾನಿ ಸಂಭವಿಸಿದ ಕಾರಣ ಅದು ಸ್ಫೋಟಗೊಂಡ ಘಟನೆ ನಡೆದಿದೆ. ಬೆಂಗಳೂರಿನ ಹೆಚ್ ಎಸ್ ಆರ್ ಲೇ ಔಟ್ ನ ಏಳನೇ ಹಂತದಲ್ಲಿ ಈ ದುರಂತ ನಡೆದಿದೆ.
ಸ್ಫೋಟದ ತೀವ್ರತೆಗೆ ಎರಡು ಮನೆಗಳಿಗೆ ಹಾನಿಯಾಗಿದೆ. ಬಿಡಬ್ಲ್ಯುಎಸ್ ಎಸ್ ಬಿ ಕಾಮಗಾರಿ ವೇಳೆ ಈ ದುರಂತ ನಡೆದಿದೆ ಎಂದು ವರದಿಯಾಗಿದೆ.
ಬೆಂಕಿಯನ್ನು ತಕ್ಷಣ ನಿಯಂತ್ರಣಕ್ಕೆ ತರಲಾಗಿದೆ. ಕಾಮಗಾರಿ ವೇಳೆ ನಿರ್ಲಕ್ಷ್ಯ ವಹಿಸಿದ್ದೇ ದುರಂತಕ್ಕೆ ಕಾರಣ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.