



ಹಾಲಾಡಿ: ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಕುಂದಾಪುರ ತಾಲೂಕಿನ 76- ಹಾಲಾಡಿ ಗ್ರಾಮದ ದಾಸನಕಟ್ಟೆ ತಿರುವಿನಲ್ಲಿ ಆ.7ರಂದು ನಡೆದಿದೆ. ಶೃಂಗೇರಿಯ ಉಷಾ ಸ್ವಾಮಿ ಹಾಗೂ ಅವರ ಅಕ್ಕ ಅನುರಾಧ ಎಂಬವರು ಕಮಲಶಿಲೆಯಿಂದ ಶೃಂಗೇರಿಗೆ ಸ್ಯಾಂಟ್ರೋ ಕಾರಿನಲ್ಲಿ ಕುಂದಾಪುರ –ಆಗುಂಬೆ ರಾಜ್ಯಹೆದ್ದಾರಿಯಲ್ಲಿ ತೆರಳುತ್ತಿದ್ದರು. ಕಾರು ಹಾಲಾಡಿ ಗ್ರಾಮದ ದಾಸನಕಟ್ಟೆ ತಿರುವಿನಲ್ಲಿ ಚಲಿಸುತ್ತಿದ್ದ ವೇಳೆ ಹೈಕಾಡಿ ಕಡಯಿಂದ ಬಂದ ಕಾರೊಂದು ಡಿಕ್ಕಿಯಾಗಿದೆ. ಇದರ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ಎರಡು ಕಾರುಗಳು ಜಖಂಗೊಂಡಿವೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.