



ಸುಳ್ಯ : ಮಡಿಕೇರಿಯಲ್ಲಿ ಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದುವ ಸುಳ್ಯದ ಚಿನ್ನಪ್ಪ ನಾಯ್ಕ್ ಇಂದು ಹೃದಯಾಘಾತದಿಂದ ಮೃತರಾದರು. ಚಿನ್ನಪ್ಪ ನಾಯ್ಕ ಅವರು ರಜೆಯಲ್ಲಿ ಮನೆಯಲ್ಲಿದ್ದು ಮುಂಜಾನೆ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಕಡಬ ಸರಕಾರಿ ಆಸ್ಪತ್ರೆಗೆ ಕರೆತರಲಾಗಿತ್ತಾದರೂ ದಾರಿ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದರು. ಮೃತ ಚಿನ್ನಪ್ಪ ನಾಯ್ಕ ಅವರು ನವೆಂಬರ್ ತಿಂಗಳಿನಲ್ಲಿ ಎಸ್.ಐ.ಆಗಿ ಭಡ್ತಿಗೊಂಡಿದ್ದರು. ಇವರು ಮುಂದಿನ ತಿಂಗಳು ನಿವೃತ್ತಿ ಹೊಂದಲಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.