



ಬೆಂಗಳೂರು : ಮುಂದಿನ 24 ಗಂಟೆಗಳಲ್ಲಿಕೇರಳ, ಕರ್ನಾಟಕ, ತಮಿಳುನಾಡು ಸೇರಿದಂತೆ ಹಿಮಾಲಯ, ಬಿಹಾರ, ಮತ್ತು ಪಶ್ಚಿಮ ಬಂಗಾಳದಲ್ಲಿ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗಲಿದೆ.
ಸಾಮಾನ್ಯವಾಗಿ ಜೂನ್ 1 ರಂದು ಮಾನ್ಸೂನ್ ಮಾರುತಗಳು ಕೇರಳ ಪ್ರವೇಶಿಸುವುದು ವಾಡಿಕೆ. ಈ ವರ್ಷ ಮೂರು ದಿನ ಮೊದಲೇ ಮಾನ್ಸೂನ್ ಪ್ರವೇಶವಾಗಿದೆ ಎಂದು ಐಎಂಡಿ ತಿಳಿಸಿದೆ. ಕರ್ನಾಟಕ, ಆಂದ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಮುಂದಿನ 24 ಗಂಟೆಯೊಳಗೆ ಮಳೆಯಾಗಲಿದ್ದು, ತಮಿಳುನಾಡು, ಪುದುಚೇರಿ ಮತ್ತು ಕರೈಕಲ್ನಲ್ಲಿ ಐದು ದಿನದ ನಂತರ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.
ಸದ್ಯ ಮಾನ್ಸೂನ್ ಮಾರುತಗಳು 40-50 ಕಿಮೀ ವೇಗದಲ್ಲಿದ್ದು, ಇದು ತನ್ನ ವೇಗವನ್ನು ಮತ್ತಷ್ಟು ಹೆಚ್ಚಿಸಿ, ಭಾರೀ ಬಿರುಗಾಳಿ ಸಹಿತ ಮಳೆಯಾಗಲಿದೆ . ಒಟ್ಟಾರೆ ಈ ಬಾರಿಯ ಮಾನ್ಸೂನ್ ದೇಶಾದ್ಯಂತ ಉತ್ತಮ ಮಳೆ ತರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.