



ಹೆಬ್ರಿ : ಶಿವಮೊಗ್ಗದಿಂದ ಉಡುಪಿಗೆ ಹೋಗುವ ಮಿನಿ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದ ಘಟನೆ ಹೆಬ್ರಿ ಗ್ರಾಮಪಂಚಾಯಾತ್ ವ್ಯಾಪ್ತಿಯ ಎಸ್ ಆರ್ ಕಾಲೇಜಿನ ಬಳಿ ನಡೆದಿದೆ.ಪರಿಣಾಮ ಹಲವರು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ . ಶಿವಮೊಗ್ಗದಿಂದ ಉಡುಪಿ ಕಡೆಗೆ ಹೋಗುತಿದ್ದ ಖಾಸಗಿ ಬಸ್ಸು ಸ್ಟೇರಿಂಗ್ ಎಂಡ್ ತುಂಡಾದ ಕಾರಣ ಚಾಲಕನ ನಿಯಂತ್ರಣ ತಪ್ಪಿದ್ದು ರಸ್ತೆ ಬದಿಯ ಮರಕ್ಕೆ ಗುದ್ದಿದೆ, ಬಸ್ ನಲ್ಲಿ ಪ್ರಯಾಣಿಸುತಿದ್ದ ಮೂರು ಪ್ರಯಾಣಿಕರಿಗೆ ಅಲ್ಪಸ್ವಲ್ಪ ಪೆಟ್ಟಾಗಿದ್ದು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಬ್ರಿ ಠಾಣೆಯ ಪೋಲಿಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ .
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.