logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿ: ಜಾಗದ ತರಕಾರು ಇತ್ತಂಡಗಳ ಗಲಾಟೆ : ಪ್ರಕರಣ ದಾಖಲು

ಟ್ರೆಂಡಿಂಗ್
share whatsappshare facebookshare telegram
5 Nov 2022
post image

ಕಾರ್ಕಳ: ಇತ್ತಂಡಗಳ ನಡುವೆ ನಡೆದ ಗಲಾಟೆಯಲ್ಲಿ ಹೆಬ್ರಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ.

ಬಗ್ಗೆ ಸುಕುಮಾರ ಶೆಟ್ಟಿ ಎಂಬವರು ನೀಡಿದ ದೂರಿನಲ್ಲಿ, ಗದಗ ಜಿಲ್ಲೆಯಲ್ಲಿ ಇರುವ ಇವರು ಹೆಬ್ರಿಯ ಬೇಳಂಜೆ ಗ್ರಾಮದಲ್ಲಿ ಕುಟುಂಬದ ಜಾಗ ಹೊಂದಿದ್ದಾರೆ. ಈ ಜಾಗಕ್ಕೆ ಸಂಬಂಧಿಸಿ ವಿಭಾಗ ಪತ್ರವು ಅಗಿರುತ್ತದೆ. ಸುಕುಮಾರ ಶೆಟ್ಟಿ ಅಗಾಗ ಬೇಳಂಜೆಗೆ ಬಂದು ಹೋಗುತ್ತಿದ್ದು, ಅದರಂತೆ ನ.4 ರಂದು ಸುಕುಮಾರ ಶೆಟ್ಟಿ ರವರು ತನ್ನ ತಾಯಿಯೊಂದಿಗೆ ಬೇಳಂಜೆಗೆ ಬಂದು ತಮ್ಮ ಜಾಗದಲ್ಲಿ ಜೆಸಿಬಿಯಿಂದ ಕೆಲಸ ಮಾಡಿಸುತ್ತಿರುವಾಗ ಸುಕುಮಾರ ಶೆಟ್ಟಿ ರವರ ಚಿಕ್ಕಮ್ಮ ಆರೋಪಿತೆ ಅರುಣ ಬಿ.ಶೆಟ್ಟಿ ಅಲ್ಲಿಗೆ ಬಂದು ಜೆಸಿಬಿಯ ಮುಂದೆ ಅಡ್ಡ ಮಲಗಿದ್ದರು. ಈ ವೇಳೆ ಅವರನ್ನು ಸುಕುಮಾರ ಶೆಟ್ಟಿ ರವರು ತಡೆಯಲು ಹೋದಾಗ ಆರೋಪಿತೆ ಅರುಣ ಬಿ ಶೆಟ್ಟಿ ಇವರು ಏಕಾಏಕಿ ಇವರ ಮೇಲೆ ಚೂರಿಯಿಂದ ಹಲ್ಲೆ ಮಾಡಿ ಅವಾಚ್ಯ ಶಬ್ದದಿಂದ ಬೈದು ಜೀವ ಬೆದರಿಕೆ ಹಾಕಿ ಓಡಿ ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದೇ ವಿಚಾರವಾಗಿ ಅರುಣ.ಬಿ.ಶೆಟ್ಟಿ ಅವರು ಪೊಲೀಸರಿಗೆ ದೂರು ನೀಡಿದ್ದು, ಬೇಳಂಜೆ ಗ್ರಾಮದ ನಡುಗುಡ್ಡೆ ಇವರು ತನ್ನ ಗಂಡನೊಂದಿಗೆ ವಾಸವಾಗಿದ್ದಾರೆ. ಅವರಿಗೆ ತಾಯಿಯ ಹೆಸರಿನಲ್ಲಿದ್ದ ಜಾಗದ ಪಾಲಿನ ವಿಚಾರದಲ್ಲಿ ತಕರಾರು ಇದ್ದು, ನ.4 ರಂದು ಮದ್ಯಾಹ್ನ 12:00 ಗಂಟೆಗೆ ತಮ್ಮ ಅಕ್ಕ ಗುಲಾಬಿ ಮತ್ತು ಅವರ ಮಗ ಸುಕುಮಾರ ಇವರು ಜೆ.ಸಿ.ಬಿ ಯಲ್ಲಿ ಅರುಣ.ಬಿ.ಶೇಡ್ತಿ ರವರ ತಾಯಿಯವರಿಗೆ ಸೇರಿದ ಜಾಗದಲ್ಲಿ ಕೆಲಸ ಮಾಡಿಸುವಾಗ ಅಲ್ಲಿಗೆ ಹೋಗಿ ಈ ಜಾಗವು ತಾಯಿಯ ಹೆಸರಿನಲ್ಲಿದೆ ಇಲ್ಲಿ ಕೆಲಸ ಮಾಡಬೇಡಿ ಎಂದು ಹೇಳಿ ತಡೆಯಲು ಹೋದಾಗ ಆರೋಪಿತರು ಅವಾಚ್ಯಶಬ್ದದಿಂದ ಬೈದು ಹೊಡೆದು ಹಲ್ಲೆ ಮಾಡಿ ಅಲ್ಲಿಯೇ ಇದ್ದ ಅವರಣ ಇರದ ಬಾವಿಗೆ ದೂಡಿ ಕೊಲೆ ಮಾಡಲು ಪ್ರಯತ್ನಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.