



ಕಾರ್ಕಳ: ಕಾರ್ಕಳ ತಾಲೂಕಿನ ಹಿರ್ಗಾನ ಶಾಲೆಯ ಸಮೀಪದಲ್ಲಿ ಎರಡು ವಾಹನಗಳ ನಡುವೆ ಒವರ್ ಟೇಕ್ ಮಾಡುವ ಸಂದರ್ಭದಲ್ಲಿ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ವಿಶ್ವನಾಥ(60), ಮಲ್ಲಿಕಾರ್ಜುನ(70), ಸಿದ್ಧೇಶಪ್ಪ(60), ಅರುಣಾ(40) ಎಂದು ಗುರುತಿಸಲಾಗಿದೆ.
ಹೆಬ್ರಿಯಿಂದ ಮಿಯ್ಯಾರು ಕಡೆಗೆ ಬರುತ್ತಿದ್ದ ಮಾರುತಿ ಓಮ್ನಿ ಹಾಗೂ ಮಂಗಳೂರು ಕಡೆಯಿಂದ ಭದ್ರಾವತಿ ಕಡೆಗೆ ಹೋಗುತ್ತಿದ್ದ ಸ್ಯಾಟ್ರೋ ಕಾರು ಮುಖಾಮುಖಿ ಡಿಕ್ಕಿ ಹೊಡೆದಿತ್ತು. ಭದ್ರಾವತಿ ಕಡೆಗೆ ಪ್ರಯಾಣಿಸುತ್ತಿದ್ದ ನಾಲ್ವರು ಘಟನೆಯಲ್ಲಿ ಗಾಯಗೊಂಡು ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.