



ಹಿರಿಯಡ್ಕ: ಕಳೆದ ಮೂರ್ನಾಲ್ಕು ವರ್ಷಗಳಿಂದ ಸಕ್ಕರೆ ಕಾಯಿಲೆ ಹಾಗೂ ಉಬ್ಬಸ ಕಾಯಿಲೆಯಿಂದ ನರಳುತಿದ್ದ ಎಸ್.ಲಲಿತ (83) ಎಂಬ ವೃದ್ಧೆ ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಶನಿವಾ ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಣಜಾರು ಗ್ರಾಮದ ಗುಡ್ಡೆಯಂಗಡಿಯಿಂದ ವರದಿಯಾಗಿದೆ.
ಜೂ.೧೫ರಂದು ಬೆಳಗ್ಗೆ 9.50ರಿಂದ 10.40ರ ನಡುವೆ ಈ ಘಟನೆ ನಡೆದಿದೆ. ಕಾಯಿಲೆಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಸಂಪೂರ್ಣ ಗುಣಮುಖರಾಗದ ಕಾರಣ ಆಕೆ ಜೀವನದಲ್ಲಿ ಜಿಗುಪ್ಸೆಗೊಂಡಿದ್ದರೆಂದು ಹೇಳಲಾಗಿದೆ. ಈ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.