



ಮಲ್ಪೆ:ಹೂಡೆ ಸಮೀಪದ ಬೀಚ್ ನಲ್ಲಿ ನೀರಿಗೆ ಇಳಿದಿದ್ದ ಮಣಿಪಾಲದ 15 ವಿದ್ಯಾರ್ಥಿಗಳಲ್ಲಿ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿ ಇಬ್ಬರು ಮೃತಪಟ್ಟ ಘಟನೆ ರವಿವಾರ ಸಂಜೆ ನಡೆದಿದೆ.
ಮತ್ತೋರ್ವ ವಿದ್ಯಾರ್ಥಿಗೆ ಶೋಧ ಕಾರ್ಯ ನಡೆಸಲಾಗುತ್ತಿದೆ. ಬೆಂಗಳೂರಿನ ಷಣ್ಮುಖ (19), ನಿಶಾಂತ್ (19) ಸಾವನ್ನಪ್ಪಿದ್ದು, ನಾಪತ್ತೆಯಾದ ಹೈದರಾಬಾದಿನ ಶ್ರೀಕರನಿಗಾಗಿ (19)ಹುಡುಕಾಟನಡೆಸಲಾಗುತ್ತಿದೆ .
ಅಮಾವಾಸ್ಯೆ ಯ ಸಂದರ್ಭದಲ್ಲಿ ನೀರಿನ ಅಲೆಗೆ ಹೆಚ್ಚಾಗಿದ್ದರು ಈ ವೇಳೆ ಮೂವರು ಅಲೆಗಳ ಅಬ್ಬರಕ್ಕೆ ಸಿಲುಕಿ ಕೊಚ್ಟಿಹೋದರು. ಸ್ಥಳೀಯರು ಇಬ್ಬರ ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಪೊಲೀಸರು ಮತ್ತು ಸ್ಥಳೀಯರು ಮತ್ತೊಬ್ಬನಿಗಾಗಿ ಹುಡುಕಾಟ ನಡೆಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.